Breaking News

ಜಿಲ್ಲಾಧಿಕಾರಿ ನಿವಾಸದ ಗಾರ್ಡ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

Spread the love

ಜಿಲ್ಲಾಧಿಕಾರಿ ನಿವಾಸದ ಗಾರ್ಡ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಬೆಳಗಾವಿ- ಬೆಳಗಾವಿ ಜಿಲ್ಲಾಧಿಕಾರಿಗಳ ಸರ್ಕಾರಿ ನಿವಾಸದ ಮುಖ್ಯದ್ವಾರದಲ್ಲಿ ಕರ್ತವ್ಯ ನಿಭಾಯಿಸುತ್ತಿದ್ದ ಪೋಲೀಸ್ ಪೇದೆಯೊಬ್ಬ ಸಕ್ಯುರಿಟಿಗೆ ನೀಡಲಾಗಿದ್ದ ಆಯುಧದಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಪ್ರಕಾಶ ಗುರುವಣ್ಣವರ (35) ಆತ್ಮತ್ಯೆ ಮಾಡಿಕೊಂಡ ಪೇದೆಯಾಗಿದ್ದು. ಕಿತ್ತೂರು ಸಮೀಪದ ಅಂಬಡಗಟ್ಟಿ ಗ್ರಾಮದವರಾಗಿದ್ದಾರೆ.

ಇವರು ಮನೋವ್ಯಾದಿಯಿಂದ ಬಳಲುತ್ತಿದ್ದರು,ಅದರ ಉಪಚಾರವನ್ನು ಪಡೆಯುತ್ತಿದ್ದರು. ನಿನ್ನೆ ರಾತ್ರಿ ಇವರ ಮನೆಯವರು ಸ್ಮಾರ್ಟ್ ಫೋನ್ ಕಸಿದುಕೊಂಡು ಸಾದಾ ಫೋನ್ ನೀಡಿದ್ದಕ್ಕಾಗಿ ಮನನೊಂದು ಈತ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೋಲೀಸರು ಶಂಕಿಸಿದ್ದಾರೆ.

ಸ್ಥಳಕ್ಕೆ ನಗರ ಪೋಲೀಸ್ ಆಯುಕ್ತ ಲೋಕೇಶಕುಮಾರ್ ಭೇಟಿ ನೀಡಿ ಪರಶೀಲನೆ ನಡೆಸಿದ್ದಾರೆ.

ನಿನ್ನೆ ಮದ್ಯರಾತ್ರಿ ಈ ಘಟನೆ ನಡೆದಿದ್ದು ಇಂದು ಬೆಳಗಿನ ಜಾವ ಬೆಳಕಿಗೆ ಬಂದಿದೆ


Spread the love

About Laxminews 24x7

Check Also

ಪ್ರಸಕ್ತ ಸಾಲಿನ ಪದವಿ ಪೂರ್ವ ಕಾಲೇಜುಗಳ ಬಾಲಕ, ಬಾಲಕಿಯರ ರಾಜ್ಯಮಟ್ಟದ ಸ್ಕೇಟಿಂಗ್ ಸ್ಪರ್ಧೆಯನ್ನು ನ.26 ರಿಂದ ಮಾಲಿನಿ ಸಿಟಿ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಎಸ್.ಎನ್.ದೇಸಾಯಿ ಹೇಳಿದರು.

Spread the loveಬೆಳಗಾವಿ :ಪ್ರಸಕ್ತ ಸಾಲಿನ ಪದವಿ ಪೂರ್ವ ಕಾಲೇಜುಗಳ ಬಾಲಕ, ಬಾಲಕಿಯರ ರಾಜ್ಯಮಟ್ಟದ ಸ್ಕೇಟಿಂಗ್ ಸ್ಪರ್ಧೆಯನ್ನು ನ.26 ರಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ