Home / ಜಿಲ್ಲೆ / ಸಂತೋಷ್ ಅಣ್ಣಾ ಜಾರಕಿಹೊಳಿ ಅವರ ಶ್ರೇಷ್ಠ ಫೌಂಡೇಶನ್ ವತಿಯಿಂದ ಈ ವಾರದ ಅನ್ನ ಸಂತರ್ಪಣೆ ಕಾರ್ಯಕ್ರಮ ರಾಮ ದುರ್ಗ ತಾಲೂಕಿನ ಉದಪುಡಿ ಗ್ರಾಮದಲ್ಲಿ

ಸಂತೋಷ್ ಅಣ್ಣಾ ಜಾರಕಿಹೊಳಿ ಅವರ ಶ್ರೇಷ್ಠ ಫೌಂಡೇಶನ್ ವತಿಯಿಂದ ಈ ವಾರದ ಅನ್ನ ಸಂತರ್ಪಣೆ ಕಾರ್ಯಕ್ರಮ ರಾಮ ದುರ್ಗ ತಾಲೂಕಿನ ಉದಪುಡಿ ಗ್ರಾಮದಲ್ಲಿ

Spread the love

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ 

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಉದಪುಡಿ ಗ್ರಾಮದಲ್ಲಿ ಶ್ರೀ ಪಾಂಡುರಂಗ
ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಈ ಅನ್ನ ಸಂತರ್ಪಣೆ ಕಾರ್ಯವು ಜಿಲ್ಲಾದ್ಯಂತ ನಡೆಯುತ್ತಿದ್ದು ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದ್ದು ಈ ಸೇವೆ ನಿರಂತರವಾಗಿರಲಿ ಎಂದು ಊರಿನ ಹಿರಿಯರು ಆಶಿಸಿದ್ದಾರೆ.

 

ಈ ಸಂದರ್ಭದಲ್ಲಿ ಪ್ರಭು ಕರಡಿಗುಡ್ಡ, ಕರಿಬಸಪ್ಪ ಉಳ್ಳಾಗಡ್ಡಿ, ಹನುಮಂತ ಬೋಲಾದಯೆಲ್ಲಿ, ಪಾಂಡುರಂಗ ಪೂಜಾರಿ, ಸಂಗಯ್ಯ ಹಿರೇಮಠ್, ಭೀಮಶಿ ಜಂಬಗಿ.ಸತೀಶ ಜಾದವ್
ಊರಿನ ರೈತರು, ಹಿರಿಯರು ಮತ್ತು ಅನೇಕ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ