Breaking News

ಬೆಳ್ಳಂಬೆಳಿಗ್ಗೆ ಜೆಸಿಬಿ ಘರ್ಜಿಸಿ ಅತಿಕ್ರಮಣ ತೆರವುಗೊಳಿಸಿದ ಮಹಾನಗರ ಪಾಲಿಕೆ

Spread the love

ವಿಜಯಪುರ ದಲ್ಲಿ ಬೆಳ್ಳಂಬೆಳಿಗ್ಗೆ ಜೆಸಿಬಿ ಘರ್ಜಿಸಿದೆ. ಅತಿಕ್ರಮಣ ಗೊಂಡಿದ್ದ ರಸ್ತೆ ತೆರವು ಮಾಡಲಾಗಿದೆ‌.ವಿಜಯಪುರ ‌ನಗರದ ವಲ್ಲಭಭಾಯಿ ವೃತ್ತದಿಂದ ವಿಶ್ವೇಶ್ವರಯ್ಯ ವೃತ್ತದ ವರೆಗೆ ಅತಿ ಕ್ರಮಣ ತೆರವು ಮಾಡಲಾಯಿತು. 100 ಫೂಟ್ ಅಗಲವಿರುವ ರಸ್ತೆಯಲ್ಲಿ ಹಲವು ಕಡೆ ಅತೀಕ್ರಮಣವಾಗಿತ್ತು.

ಈ ಕುರಿತು ಮಹಾನಗರ ಪಾಲಿಕೆ ಹಲವು ಬಾರಿ ನೋಟಿಸ್ ಜಾರಿ‌ ಮಾಡಿದ್ದರೂ ಸಹಿತ ಅತಿಕ್ರಮಣ ತೆರವುಗೊಂಡಿರಲಿಲ್ಲ.

ಈ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ್ ಮೆಕ್ಕಳಕಿ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ ಮಾಡಲಾಯಿತು.

ರಾಮನಗರ ಸೇರಿದಂತೆ ವಿವಿಧ ಭಾಗದಲ್ಲಿ ಒತ್ತುವರಿ ತೆರವು ಮಾಡಲಾಯಿತು. ಈ ಸಂದರ್ಭದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು.


Spread the love

About Laxminews 24x7

Check Also

ಮಹಿಷ ದಸರಾ | ಯಾರಿಗೂ ತೊಂದರೆ ಆಗದಂತೆ ಮಾಡಿಕೊಳ್ಳಬಹುದು: ಮಹದೇವಪ್ಪ

Spread the love ಮೈಸೂರು: ‘ಯಾರಿಗೂ, ಯಾವ ತೊಂದರೆಯೂ ಆಗದಂತೆ ಯಾರು ಬೇಕಾದರೂ ಅವರವರ ಧಾರ್ಮಿಕ ಆಚರಣೆ ಮಾಡಿಕೊಳ್ಳಬಹುದು’ ಎಂದು ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ