Breaking News

ಮೂಡಲಗಿ: ಪಟ್ಟಣದಲ್ಲಿ ಅಯ್ಯಪ್ಪಸ್ವಾಮಿ ಭವ್ಯ ಮೆರವಣಿಗೆ

Spread the love

ಮೂಡಲಗಿ: ಪಟ್ಟಣದಲ್ಲಿ ಅಯ್ಯಪ್ಪಸ್ವಾಮಿ ಸನ್ನಿಧಾನದ 29ನೇ ವರ್ಷದ ಮಹಾಪೂಜೆ ಉತ್ಸವ ಅಂಗವಾಗಿ ಸೋಮವಾರ ಸ್ಥಳೀಯ ಯಲ್ಲಮ್ಮದೇವಿ ದೇವಸ್ಥಾನದಿಂದ ಭವ್ಯ ಮೆರವಣಿಗೆ ನಡೆಯಿತು.

ಮೂಡಲಗಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲಕರ, ರವಿ ಗುರುಸ್ವಾಮಿ, ಬೈಂದೂರ ರಾಜುಶೆಟ್ಟಿ, ಹುಬ್ಬಳ್ಳಿಯ ಮೋಹನ, ಬೆಳಗಾವಿಯ ಮಾರುತಿ ಗುರುಸ್ವಾಮಿಗಳು ಮೆರವಣಿಗೆಗೆ ಚಾಲನೆ ನೀಡಿದರು.

 

ಅಯ್ಯಪ್ಪಸ್ವಾಮಿಯ ಮೂರ್ತಿಯನ್ನು ಹೊತ್ತ ಜಂಬೂ ಸವಾರಿಯೊಂದಿಗೆ ವಿವಿಧ ಕಲಾ ತಂಡಗಳು, ಸಾರವಾಡ ಗೊಂಬೆ ಕುಣಿತ, ಒಂಟೆ, ಕುದರೆಗಳು, ವಿವಿಧ ವಾದ್ಯಗಳು ಗಮನ ಸೆಳೆದವು.

ಕುಂಭ ಹೊತ್ತ ಸ್ವಾಮಿಗಳ ಸಾಲು, ದೀಪ, ಆರತಿಗಳು ಮೆರವಣಿಗೆಗೆ ಕಳೆಕಟ್ಟಿತು. ಮೂಡಲಗಿ ಸೇರಿದಂತೆ ವಿವಿಧ ಗ್ರಾಮಗಳ ಮಾಲಾಧಾರಿಗಳು, ಮಂಜುನಾಥ ಸೈನಿಕ ತರಬೇತಿ ಕೇಂದ್ರ ಮತ್ತು ಕರುನಾಡು ಸೈನಿಕ ತರಬೇತಿ ಕೇಂದ್ರದ ಪ್ರಶಿಕ್ಷಣಾರ್ಥಿಗಳು ಮೆರವಣಿಗೆಯಯಲ್ಲಿ ಭಾಗವಹಿಸಿದ್ದರು. ಅರ್ನಸಂತರ್ಪಣೆಯಲ್ಲಿ ಜಾತಿ, ಧರ್ಮ, ಮೇಲು, ಕೀಳು ಎನ್ನದೆ ಎಲ್ಲರೂ ಭಾಗವಹಿಸಿ ಸೌಹಾರ್ದ ಬಿಂಬಿಸಿದರು.


Spread the love

About Laxminews 24x7

Check Also

ಸಿಎಂ ಸಿದ್ದರಾಮಯ್ಯ ಬಗ್ಗೆ ಆಡಳಿತ ಪಕ್ಷದವರೇ ವಿಶ್ವಾಸ ಕಳೆದುಕೊಂಡಿದ್ದಾರೆ: ಬಿ ವೈ ವಿಜಯೇಂದ್ರ

Spread the loveಶಿವಮೊಗ್ಗ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಆಡಳಿತ ಪಕ್ಷದ ಶಾಸಕರುಗಳೇ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ