Breaking News

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒಟ್ಟೂ 1610 ಕೋಟಿ ರೂ. ಪ್ಯಾಕೇಜ್ ಘೋಷಿಸಿದ್ದಾರೆ.

Spread the love

ಬೆಂಗಳೂರು – ಕೊರೋನಾದಿಂದ ಸಂಕಷ್ಟಕ್ಕೊಳಗಾಗಿರುವ ಹಲವಾರು ರೀತಿಯ ವೃತ್ತಿನಿರತರಿಗೆ ಕರ್ನಾಟಕ ಸರಕಾರ ಪರಿಹಾರ ಘೋಷಿಸಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒಟ್ಟೂ 1610 ಕೋಟಿ ರೂ. ಪ್ಯಾಕೇಜ್ ಘೋಷಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಸಂಬಂಧ ಬುಧವಾರ ಮಾಹಿತಿ ನೀಡಿದ್ದಾರೆ. ಆಟೋ ರಿಕ್ಷಾ, ಟ್ಯಾಕ್ಸಿ ಚಾಲಕರಿಗೆ, ಕ್ಷೌರಿಕರು, ಮಡಿವಾಳರು ಸೇರಿದಂತೆ ಹಲವಾರು ವರ್ಗಗಳಿಗೆ ತಲಾ 5 ಸಾವಿರ ರೂ. ಪರಿಹಾರ ನೀಡುವ ಘೋಷಣೆ ಮಾಡಿದ್ದಾರೆ.

7.75 ಲಕ್ಷ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ಪರಿಹಾರ ದೊರೆಯಲಿದೆ. ಜೊತೆಗೆ ಈಗಾಗಲೆ 2 ಸಾವಿರ ರೂ. ನೀಡಲಾಗಿದ್ದ ಕಟ್ಟಡ ಕಾರ್ಮಿಕರಿಗೆ ಹೆಚ್ಚುವರಿಯಾಗಿ 3 ಸಾವಿರ ರೂ. ಸೇರಿಸಿ ಒಟ್ಟೂ 5 ಸಾವಿರ ರೂ ನಿಡಲಾಗುತ್ತದೆ. ಒಟ್ಟೂ 15 ಲಕ್ಷ ಕಟ್ಟಡ ಕಾರ್ಮಿಕರಿಗೆ ಪ್ರಯೋಜನವಾಗಲಿದೆ. ವಲಸೆ ತಪ್ಪಿಸಲು ಈ ಘೋಷಣೆ ಮಾಡಲಾಗಿದೆ.

ಇದರ ಜೊತೆಗೆ ಸಣ್ಣ ಹಾಗೂ ಮಧ್ಯಮ ವರ್ಗದ ಉದ್ಯಮಿಗಳು ಸೇರಿದಂತೆ ಅನೇಕರಿಗೆ ವಿದ್ಯುತ್ ಬಿಲ್ ತುಂಬಲು ವಿನಾಯಿತಿ ಸೇರಿದಂತೆ ಅನೇಕ ಘೋಷಣೆಗಳನ್ನು ಯಡಿಯೂರಪ್ಪ ಮಾಡಿದ್ದಾರೆ


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ