Breaking News

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒಟ್ಟೂ 1610 ಕೋಟಿ ರೂ. ಪ್ಯಾಕೇಜ್ ಘೋಷಿಸಿದ್ದಾರೆ.

Spread the love

ಬೆಂಗಳೂರು – ಕೊರೋನಾದಿಂದ ಸಂಕಷ್ಟಕ್ಕೊಳಗಾಗಿರುವ ಹಲವಾರು ರೀತಿಯ ವೃತ್ತಿನಿರತರಿಗೆ ಕರ್ನಾಟಕ ಸರಕಾರ ಪರಿಹಾರ ಘೋಷಿಸಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒಟ್ಟೂ 1610 ಕೋಟಿ ರೂ. ಪ್ಯಾಕೇಜ್ ಘೋಷಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಸಂಬಂಧ ಬುಧವಾರ ಮಾಹಿತಿ ನೀಡಿದ್ದಾರೆ. ಆಟೋ ರಿಕ್ಷಾ, ಟ್ಯಾಕ್ಸಿ ಚಾಲಕರಿಗೆ, ಕ್ಷೌರಿಕರು, ಮಡಿವಾಳರು ಸೇರಿದಂತೆ ಹಲವಾರು ವರ್ಗಗಳಿಗೆ ತಲಾ 5 ಸಾವಿರ ರೂ. ಪರಿಹಾರ ನೀಡುವ ಘೋಷಣೆ ಮಾಡಿದ್ದಾರೆ.

7.75 ಲಕ್ಷ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ಪರಿಹಾರ ದೊರೆಯಲಿದೆ. ಜೊತೆಗೆ ಈಗಾಗಲೆ 2 ಸಾವಿರ ರೂ. ನೀಡಲಾಗಿದ್ದ ಕಟ್ಟಡ ಕಾರ್ಮಿಕರಿಗೆ ಹೆಚ್ಚುವರಿಯಾಗಿ 3 ಸಾವಿರ ರೂ. ಸೇರಿಸಿ ಒಟ್ಟೂ 5 ಸಾವಿರ ರೂ ನಿಡಲಾಗುತ್ತದೆ. ಒಟ್ಟೂ 15 ಲಕ್ಷ ಕಟ್ಟಡ ಕಾರ್ಮಿಕರಿಗೆ ಪ್ರಯೋಜನವಾಗಲಿದೆ. ವಲಸೆ ತಪ್ಪಿಸಲು ಈ ಘೋಷಣೆ ಮಾಡಲಾಗಿದೆ.

ಇದರ ಜೊತೆಗೆ ಸಣ್ಣ ಹಾಗೂ ಮಧ್ಯಮ ವರ್ಗದ ಉದ್ಯಮಿಗಳು ಸೇರಿದಂತೆ ಅನೇಕರಿಗೆ ವಿದ್ಯುತ್ ಬಿಲ್ ತುಂಬಲು ವಿನಾಯಿತಿ ಸೇರಿದಂತೆ ಅನೇಕ ಘೋಷಣೆಗಳನ್ನು ಯಡಿಯೂರಪ್ಪ ಮಾಡಿದ್ದಾರೆ


Spread the love

About Laxminews 24x7

Check Also

ವೃದ್ಧನ ಡಿಜಿಟಲ್ ಅರೆಸ್ಟ್ ಮಾಡಿ ₹1.77 ಕೋಟಿ ದೋಚಿದ ಸೈಬರ್ ವಂಚಕರು

Spread the loveಬೆಂಗಳೂರು: ವೃದ್ಧನನ್ನು ಒಂದು ವಾರ ಡಿಜಿಟಲ್ ಬಂಧನದಲ್ಲಿಟ್ಟ ಸೈಬರ್ ವಂಚಕರು 1.77 ಕೋಟಿ ರೂ. ವರ್ಗಾವಣೆ ಮಾಡಿಕೊಂಡು ವಂಚಿಸಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ