Breaking News

ಕರ್ನಾಟಕದ ವಾಹನ ಮೇಲೆ ಕಲ್ಲು ತೂರಾಟ

Spread the love

ನಿನ್ನೆ ತಾನೆ ಮಹಾರಾಷ್ಟ್ರ ಕರ್ನಾಟಕ ಗಡಿ ಸಂಬಂಧ ಕೇಂದ್ರ ಗೃಹ ಸಚಿವ ಅಮೀತ ಷಾ ನೇತೃತ್ವದಲ್ಲಿ ಉಭಯ ರಾಜ್ಯಗಳ ಮೀಟಿಂಗ್ ಮಾಡಿ ಗಡಿ ಖ್ಯಾತೆ ಯಾರು ತೆಗೆಯುವಂತಿಲ್ಲ ಎಂದು ನಿರ್ಧಾರ ಕೈಗೊಳ್ಳಲಾಗಿದೆ.

ಆದರೆ ಇಂದು ಮತ್ತೇ ಪುಂಡರು ಪುಂಡಾಟಾ ಮೆರೆದಿದ್ದಾರೆ. ಬುಧವಾರ ರಾತ್ರಿ ಪುಂಡರು ಕರ್ನಾಟಕ ರಾಜ್ಯ ಕೃಷಿ ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ಗೆ ಸೇರಿದ ವಾಹನಕ್ಕೆ ಕಲ್ಲು ಹೊಡೆದು ಜಖಂ ಗೊಳಿಸಿದ್ದಾರೆ.

ಬೆಂಗಳೂರಿನಿಂದ ಬೆಳಗಾವಿಗೆ ಚಳಿಗಾಲ ಅಧಿವೇಶನಕ್ಕಾಗಿ ವಾಹನವೊಂದು ಬಂದಿದೆ. ಇದರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.  ಸುವರ್ಣಸೌಧದ ಎದುರೇ ಈ ಕೃತ್ಯ ನಡೆದಿದೆ.ಕರ್ನಾಟಕ ಸರ್ಕಾರ ಎಂದು ಈ ಜೀಪ್‌ನಲ್ಲಿ ಬರೆದುಕೊಂಡಿದ್ದರಿಂದ ವಾಹನವನ್ನು ಅಡ್ಡಗಟ್ಟಿ ಕಲ್ಲು ತೂರಿ ವಿಕೃತಿ ಮೆರೆದಿದ್ದಾರೆ.

ಅಲ್ಲದೆ, ಚಾಲಕ ಚೇತನ್‌ ಎಂಬುವವರ ಮೇಲೂ ಹಲ್ಲೆಗೆ ಯತ್ನ ಮಾಡಿದ್ದಾರೆ. ಜತೆಗೆ ಜೀವ ಬೆದರಿಕೆಯನ್ನೂ ಒಡ್ಡಿದ್ದಾರೆ. ಈ ವೇಳೆ ತಮ್ಮ ಮೇಲೆ ಹಲ್ಲೆಗೆ ಮುಂದಾಗುತ್ತಿದ್ದಾರೆಂದು ಗೊತ್ತಾದ ತಕ್ಷಣವೇ ಚಾಲಕ ಚೇತನ್‌ ಜೀಪ್ ಚಲಾಯಿಸಿಕೊಂಡು ಹೋಗಿದ್ದು, ಪುಂಡರಿಂದ ತಪ್ಪಿಸಿಕೊಂಡಿದ್ದಾರೆ. ಬೆಳಗಾವಿ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮಾರ್ಚ್ 8. ರಂದು ವಿದ್ಯುತ್ ವ್ಯತ್ಯಯ

Spread the loveಬೆಳಗಾವಿ: ಕ.ವಿ.ಪ್ರ.ನಿ.ನಿ. ವತಿಯಿಂದ 110 ಕೆ.ವಿ. ಸುವರ್ಣ ಸೌಧ ಉಪಕೇಂದ್ರದಲ್ಲಿ ನಾಲ್ಕನೇಯ ತ್ರೈಮಾಸಿಕ ಹಾಗೂ ಇತರೆ ತುರ್ತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ