Breaking News

ನಮ್ಮ ಸರ್ವೇ ಕ್ಲಿಯರ್, ನಾವು 136 ಸೀಟ್ ಗೆಲ್ಲುತ್ತೇವೆ, :ಡಿ.ಕೆ ಶಿ

Spread the love

ಬೆಂಗಳೂರು: ನಾವು ನಡೆಸಿದಂತ ಸರ್ವೇಯಲ್ಲಿ ಕ್ಲಿಯರ್ ಆಗಿದೆ. ನಾವು 136 ಸೀಟ್ ಗೆಲ್ಲುತ್ತೇವೆ. ಬಿಜೆಪಿ ಕೇವಲ 60 ರಿಂದ 65 ಸ್ಥಾನವನ್ನು ಗೆಲ್ಲಲಿದೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ( KPCC President DK Shivakumar ) ಭವಿಷ್ಯ ನುಡಿದಿದ್ದಾರೆ.

 

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾವು ಮುಂಬರುವಂತ ಚುನಾವಣೆಯಲ್ಲಿ 136 ಸ್ಥಾನ ಗೆಲ್ಲಲಿದ್ದೇವೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ 60 ರಿಂದ 65 ಸ್ಥಾನ ಗೆಲ್ಲಲಿದೆ. ಐದು ಬಾರಿ ಸೋತ ಕ್ಷೇತ್ರಗಳಲ್ಲಿಯೂ ನಮಗೆ ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ( Karnataka Assembly Election 2023 ) ಗೆಲುವು ಸಿಗಲಿದೆ ಎಂದರು.

 

ಸಚಿವ ಅಶೋಕ್ 10 ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬರುತ್ತಾರೆ ಎನ್ನುತ್ತಿದ್ದಾರೆ. ಆದ್ರೇ ಬಿಜೆಪಿಗೆ ಸೇರಿಸಿಕೊಳ್ಳಲು ಇನ್ನೂ ಯಾಕೆ ಕಾಯುತ್ತಿದ್ದೀರಿ? ಸಂಕ್ರಾಂತ್ರಿ ಅವರಿಗೂ ಇದೆ, ನಮಗೂ ಇದೆ ಎಂಬುದಾಗಿ ಆರ್ ಅಶೋಕ್ ಗೆ ಟಾಂಗ್ ನೀಡಿದರು.

ಅಂದಹಾಗೇ ಮುಂಬರುವಂತ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಎಷ್ಟು ಸೀಟು ಗೆಲ್ಲಲಿದೆ ಎನ್ನುವ ಬಗ್ಗೆ ಪಕ್ಷದಿಂದ ಗೌಪ್ಯವಾಗಿ ಸರ್ವೇ ನಡೆಸಿತ್ತು ಎನ್ನಲಾಗುತ್ತಿದೆ. ಈ ಸರ್ವೇಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಬಹುಮತ ಪಡೆದು, ಅಧಿಕಾರಕ್ಕೆ ಬರಲಿದೆ ಎಂಬುದಾಗಿ ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಅದು ಸಾಧ್ಯವೇ ಎಂಬುದನ್ನು ಕಾದು ನೋಡಬೇಕಿದೆ.


Spread the love

About Laxminews 24x7

Check Also

ಗವರ್ನರ್ V/S ಗವರ್ನಮೆಂಟ್‌: ಭಾಷಣದ ಕೆಲ ಸಾಲು ಬದಲಾವಣೆಗೆ ನಿರ್ಧಾರ; ಒಪ್ಪದಿದ್ದರೆ ಕಾನೂನು ಹೋರಾಟವೆಂದ ಸರ್ಕಾರ

Spread the loveಬೆಂಗಳೂರು: ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ನಡುವೆ ಸಂಘರ್ಷ ಶುರುವಾದಂತಿದೆ‌. ಇಂದು ವಿಶೇಷ ಅಧಿವೇಶನಕ್ಕಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ