ಬೆಂಗಳೂರು : ಮುಂದಿನ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗುವುದು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ನನ್ನ ಅಭಿಪ್ರಾಯದಲ್ಲಿ ರಥಯಾತ್ರೆ ಆರಂಭ ಆದ ನಂತರ ಬಿಜೆಪಿ, ಕಾಂಗ್ರೆಸ್ ಪಕ್ಷಗಳಲ್ಲಿ ಗಲಿಬಿಲಿ ಪ್ರಾರಂಭ ಆಗಿದೆ. ಈಗ ಬರುತ್ತಿರುವ ಸಮೀಕ್ಷೆಗಳಲ್ಲಿ ಇವೆರಡೂ ಪಕ್ಷಗಳಿಗಿಂತ ಹೆಚ್ಚು ಸ್ಥಾನಗಳನ್ನು ಜೆಡಿಎಸ್ ಗೆಲ್ಲಲಿದೆ ಎಂದು ಗೊತ್ತಾಗಿದೆ ಎಂದರು. ಶುಕ್ರವಾರ ಶ್ರೀನಿವಾಸ ಕಲ್ಯಾಣ ಮುಗಿದ ನಂತರ ದೇವರ ಅನುಗ್ರಹ ಪಡೆದು 97 ರಿಂದ 116 ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಅವರು ಇದೇ ವೇಳೆ ಪ್ರಕಟಿಸಿದರು.
Laxmi News 24×7