Breaking News

21 ರಂದು ದಿಗಂಬರ ಜೈನ ಸಮಾಜದ ವತಿಯಿಂದ ಮೌನ ಪ್ರತಿಭಟನಾ ಮೆರವಣಿಗೆ

Spread the love

ಜಾರ್ಖಾಂಡ ರಾಜ್ಯದ ಗಿರಡಿ ಜಿಲ್ಲೆಯಲ್ಲಿರುವ ಜೈನರ ಪರಮೋಚ್ಚ ತೀರ್ಥ ಕ್ಷೇತ್ರ ಶ್ರೀ ಸಮ್ಮೇದಗಿರಿ ಉಳಿಸಿ, ಪ್ರವಾಸಿ ತಾಣವೆಂದು ಘೋಷಣೆ ರದ್ದುಪಡಿಸಿ ಜೈನ ಪವಿತ್ರ ಕ್ಷೇತ್ರವಾಗಿ ಘೋಷಿಸುವಂತೆ ಒತ್ತಾಯಿಸಿ ಡಿ.

21 ರಂದು ದಿಗಂಬರ ಜೈನ ಸಮಾಜದ ವತಿಯಿಂದ ಮೌನ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗುವುದು ಎಂದು ಜೈನ ಮುಖಂಡರಾದ ಮಹೇಂದ್ರ ಸಿಂಘಿ ಹೇಳಿದರು.

ನಗರದಲ್ಲಿಂದು ಮಾದ್ಯಮ ವರದಿಗಾರರೊಂದಿಗೆ ಮಾತನಾಡಿದ ಅವರು, ಪಾರಸನಾಥ ಪರ್ವತ ಶ್ರೀ ಸಮ್ಮೇದಗಿರಿಯನ್ನು ಮತ್ತು ಸುತ್ತಲಿನ ಮಧುಬನ ಪ್ರದೇಶವನ್ನು ಮಾಂಸ-ಮದ್ಯ ಮಾರಾಟ ಮುಕ್ತ ಪವಿತ್ರ ಜೈನ ತೀರ್ಥ ಎಂದು ಘೋಷಿಸಬೇಕು.

ಹಾಗೂ ಬೇಡಿಕೆಗಳಿಗೆ ಆಗ್ರಹಿಸಿ ಹುಬ್ಬಳ್ಳಿಯ ಶಾಂತಿನಾಥ ಸಾಂಸ್ಕೃತಿಕ ಭವನದಿಂದ ಪ್ರತಿಭಟನಾ ಮೌನ ಮೆರವಣಿಗೆ ನಡೆಸಿ ತಹಶಿಲ್ದಾರ ಮೂಲಕ ರಾಷ್ಟ್ರಪತಿ, ಪ್ರಧಾನಮಂತ್ರಿ, ಕೇಂದ್ರಮಂತ್ರಾಲಯ, ಜಾರ್ಖಾಂಡ್ ಹಾಗೂ ಕರ್ನಾಟಕ ಮುಖ್ಯಮಂತ್ರಿಗಳು, ಪ್ರದೇಶ ಸಂಸದರಿಗೆ ಆಗ್ರಹ ಮಾಡಲಾಗುವುದು ಎಂದರು


Spread the love

About Laxminews 24x7

Check Also

ಉಪಚುನಾವಣೆಯಲ್ಲಿ ಮೇಟಿ ಕುಟುಂಬದವರಿಗೆ ಟಿಕೆಟ್

Spread the loveಬೆಳಗಾವಿ: ‘ಕಾಂಗ್ರೆಸ್ ಶಾಸಕ ಎಚ್‌.ವೈ. ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ