Breaking News

ಹಳೆ ಪಿಂಚಣಿಗಾಗಿ ಹೋರಾಟ ನಡೆಸುತ್ತಿರುವ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : `NPS’ ಬಗ್ಗೆ ಚರ್ಚೆಗೆ ಸಿಎಂ ಬೊಮ್ಮಾಯಿ ಒಪ್ಪಿಗೆ

Spread the love

ಬೆಳಗಾವಿ : ಹಳೆ ಪಿಂಚಣಿ ಯೋಜನೆ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಹಳೆ ಪಿಂಚಣಿ ಯೋಜನೆ ಜಾರಿ ಸಂಬಂಧ ಚರ್ಚೆಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ.

 

ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆ ಜಾರಿಗೆ ಆಗ್ರಹಿಸಿ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕುರಿತು ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಸದನದಲ್ಲಿ ಸಮಗ್ರ ಚರ್ಚೆ ನಡೆದ ಬಳಿಕ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈಗಾಗಲೇ ಸಾವಿರಾರು ನಿವೃತ್ತ ನೌಕರರು ಹಳೆ ಪಿಂಚಣಿಯನ್ನೇ ಮುಂದುವರೆಸಬೇಕೆಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸದಸ್ಯರು ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರು ಆಗ್ರಹಿಸಿದ್ದಾರೆ.

ಬೇರೆ ಬೇರೆ ರಾಜ್ಯಗಳಲ್ಲಿ ಹಳೆ ಪಿಂಚಣಿ ವ್ಯವಸ್ಥೆಯನ್ನೇ ಮುಂದುವರೆಸುವ ಬಗ್ಗೆ ಸದಸ್ಯರು ಸದನದ ಗಮನಕ್ಕೆ ತಂದಿದ್ದಾರೆ, ರಾಜಸ್ಥಾನ, ಛತ್ತೀಸ್ಘಡ ಹೀಗೆ ಬೇರೆ ಬೇರೆ ರಾಜ್ಯಗಳಲ್ಲಿ ಹಳೆ ಪಿಂಚಣಿಯನ್ನೇ ಮುಂದುವರೆಸಿದ್ದಾರೆ , ಅಂತಿಮವಾಗಿ ಎಲ್ಲ ಸದಸ್ಯರ ಅಭಿಪ್ರಾಯಗಳನ್ನು ಸಂಗ್ರಹಿಸಿ ತೀರ್ಮಾನ ಮಾಡಲಾಗುತ್ತದೆ ಎಂದು ಹೇಳಿದರು.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ