Breaking News

ಸನ್ಯಾಸತ್ವ ಬಿಟ್ಟು ರಾಜಕೀಯಕ್ಕೆ ಬನ್ನಿ: ಬಸವಜಯ ಮೃತ್ಯುಂಜಯ ಸ್ವಾಮೀಜಿಗೆ ನಿರಾಣಿ ಸವಾಲ್

Spread the love

ಬಾಗಲಕೋಟೆ: ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರಿಗೆ ಅದೇ ಸಮುದಾಯದವರಾದ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಇಂದು ನೇರ ಸವಾಲ್ ಹಾಕಿದ್ದಾರೆ.

ಬಾಗಲಕೋಟೆ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಿರಾಣಿ, ”ನನ್ನ ಮೇಲೆ ಸಾಕಷ್ಟು ಆರೋಪ ಮಾಡಿದ್ದಾರೆ.

ಮಾಡಿರುವ ಆರೋಪ ಸಾಬೀತು ಮಾಡಿದ್ರೆ ಇವತ್ತೇ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವೆ. ಸಾಬೀತು ಮಾಡದೇ ಇದ್ರೆ ನೀವು ಸನ್ಯಾಸತ್ವ ತೊರೆದು ರಾಜಕೀಯಕ್ಕೆ ಬನ್ನಿ” ಎಂದು ಸವಾಲು ಹಾಕಿದರು.

ನಿನ್ನೆ ಸಂದರ್ಶನದಲ್ಲಿ ಪಂಚಮಸಾಲಿ 2ಎ ಮೀಸಲಾತಿ ಘೋಷಣೆ ಆಗದೇ ಇರಲು ಬಾಗಲಕೋಟೆ ಜಿಲ್ಲೆಯ ನಮ್ಮ ಸಮಾಜದ ಸಚಿವರು ಕಾರಣ ಎಂದು ಸ್ವಾಮೀಜಿ ಆರೋಪಿಸಿದ್ದಕ್ಕೆ ಸಚಿವ ನಿರಾಣಿ ಗರಂ ಆಗಿದ್ದಾರೆ. .


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ