Breaking News

ಪ್ರಧಾನಿ ಮೋದಿ ಅವರ ಮಾತೋಶ್ರೀ ವಿಧಿವಶ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಾಪ*

Spread the love

ಗೋಕಾಕ್- ಪ್ರಧಾನಿ ನರೇಂದ್ರ ಮೋದಿಯವರ ಮಾತೋಶ್ರೀ , ಶತಾಯುಷಿ ಶ್ರೀಮತಿ ಹೀರಾ ಬೇನ ಮೋದಿ ಅವರ ನಿಧನಕ್ಕೆ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ.
ಭಾರತಾಂಬೆಯ ಹೆಮ್ಮೆಯ ಪುತ್ರ ನರೇಂದ್ರ ಮೋದಿ ಅವರ ತಾಯಿ ಶುಕ್ರವಾರ ತಡರಾತ್ರಿ ನಿಧನರಾದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ನೋವಾಯಿತು. ಪ್ರಧಾನಿಯವರ ತಾಯಿ ಅತ್ಯಂತ ಸರಳತೆಗೆ ಸಾಕ್ಷಿಯಾಗಿದ್ದರು. ಪ್ರಧಾನಿ ಮೋದಿ ಅವರ ಕುಟುಂಬ ವರ್ಗಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ. ಮೃತರ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪ್ರಾರ್ಥಿಸಿದ್ದಾರೆ.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ