Breaking News

ಕಾಂಗ್ರೆಸ್ ಸರ್ಕಾರದ ಮೊದಲ ಕ್ಯಾಬಿನೆಟ್‌ ನಲ್ಲೇ ಮಹದಾಯಿಗೆ 500 ಕೋಟಿ ರೂ. ಬಿಡುಗಡೆ: ಸುರ್ಜೇವಾಲ

Spread the love

ಹುಬ್ಬಳ್ಳಿ: ಈ ಭಾಗದ ಜನರಿಗೆ ಸಂಘರ್ಷ ಮತ್ತು ಸವಾಲಿನ ಸಮಯ ಎದುರಾಗಿದೆ. ಕೃಷ್ಣಾ ನದಿ ವಿಚಾರದಲ್ಲಿ ಬಿಜೆಪಿಯವರು ಜನರಿಗೆ ದ್ರೋಹ ಮಾಡುತ್ತಾ ಬಂದಿದ್ದಾರೆ. ಮೂರು ತಿಂಗಳ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಲಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದರು.

 

ಶುಕ್ರವಾರ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಕಾಮಗಾರಿಗೆ ಪ್ರತಿ ವರ್ಷ 40 ಸಾವಿರ ಕೋಟಿ ರೂ. ಕೊಡುತ್ತೇವೆ ಎಂದಿದ್ದರು. ಆದರೆ ಒಂದು ವರ್ಷವೂ ಕೊಡಲಿಲ್ಲ. ರಾಜ್ಯಕ್ಕೆ ಅಮಿತ್ ಶಾ ಬಂದಿದ್ದಾರೆ. ಕೃಷ್ಣಾ ಮತ್ತು ಮಹಾದಾಯಿ ನೀರಿನ ಬಗ್ಗೆ ಅವರು ಮಾತನಾಡಲ್ಲ ಎಂದರು.

ಅಮಿತ್ ಶಾ ಮತ್ತು ನರೇಂದ್ರ ಮೋದಿಯವರು ಕೃಷ್ಣಾ ಮತ್ತು ಮಹಾದಾಯಿ ನೀರಿನ ಹಕ್ಕಿನಿಂದ ಕರ್ನಾಟಕದ ಜನರನ್ನು ದೂರ ಇರಿಸಿದ್ದಾರೆ. ಕರ್ನಾಟಕದ ಜನರು ಅವರ ವಂಚನೆಯ ಬಗ್ಗೆ ಎಚ್ಚೆತ್ತುಕೊಳ್ಳಬೇಕು. ಡಿ.ಕೆ. ಶಿವಕುಮಾರ ಮತ್ತು ಸಿದ್ದರಾಮಯ್ಯ ಯಾತ್ರೆಯ ಮೂಲಕ ಹೊಸ ಇತಿಹಾಸ ಬರೆಯಲು ಹೊರಟಿದ್ದಾರೆ ಎಂದರು.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ