Breaking News

ಸಿಎಂ ಹುದ್ದೆಯನ್ನೇ ಮಾರಾಟಕ್ಕಿಟ್ಟ ಅಮಿತ್ ಶಾ ಆರೋಪ ತಮಾಷೆಯಾಗಿದೆ: ಸಿದ್ದರಾಮಯ್ಯ

Spread the love

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿರುವ ಅಮಿತ್‌ ಶಾ ಅವರು ಮುಖ್ಯಮಂತ್ರಿ ಹುದ್ದೆಯನ್ನೇ ₹ 2000 ಕೋಟಿಗೆ ಮಾರಾಟಕ್ಕೆ ಇಟ್ಟಿರುವ ರಾಜಕೀಯ ವ್ಯಾಪಾರಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಮಂಡ್ಯದಲ್ಲಿ ಶುಕ್ರವಾರ ನಡೆದ ಜನ ಸಂಕಲ್ಪ ಯಾತ್ರೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ್ದ ಅವರು, ‘ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದರೆ ಕರ್ನಾಟಕ ದೆಹಲಿಯ ಎಟಿಎಂ ಆಗಲಿದೆ’ ಎಂದು ಹೇಳಿದ್ದರು. ಅಲ್ಲದೆ, ಕಾಂಗ್ರೆಸ್‌ ವಿರುದ್ಧ ಭ್ರಷ್ಟಾಚಾರದ ಹಲವು ಆರೋಪ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಸರಣಿ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, ಅಮಿತ್‌ ಶಾ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ‘ಮುಖ್ಯಮಂತ್ರಿ ಹುದ್ದೆಯನ್ನೇ ₹ 2000 ಕೋಟಿಗೆ ಮಾರಾಟಕ್ಕೆ ಇಟ್ಟಿರುವ ರಾಜಕೀಯ ವ್ಯಾಪಾರಿ ಗೃಹಸಚಿವ ಅಮಿತ್‌ ಶಾ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ಭ್ರಷ್ಟಾಚಾರದ ಆರೋಪ‌ ಮಾಡುತ್ತಿರುವುದು ತಮಾಷೆಯಾಗಿದೆ’ ಎಂದಿದ್ದಾರೆ.


Spread the love

About Laxminews 24x7

Check Also

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ

Spread the loveಕಾರವಾರ: ತಾಲೂಕಿನ ತಲಾಂದ ಸಾರ್ವಜನಿಕ ಗಣೇಶೋತ್ಸವ  ಸಮಿತಿಯ ವತಿಯಿಂದ ಬುಧವಾರ ರಾತ್ರಿ ಆಯೋಜಿಸಲಾಗಿದ್ದ ಗಣೇಶ ವಿಸರ್ಜನಾ ಮೆರವಣಿಗೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ