Breaking News

ಸಿದ್ದೇಶ್ವರ ಶ್ರೀಗಳ ದರ್ಶನ ಪಡೆದು ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ ; ಕರೆ ಮಾಡಿದ ಪ್ರಧಾನಿ

Spread the love

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ರಾತ್ರಿ ನಗರಕ್ಕೆ ಆಗಮಿಸಿ ಸಿದ್ದೇಶ್ವರ ಶ್ರೀಗಳ ಆರೋಗ್ಯ ವಿಚಾರಿಸಿದರು.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರೊಂದಿಗೆ ರಾತ್ರಿ 10-30 ರ‌ ಸುಮಾರಿಗೆ ನಗರದ ಜ್ಞಾನಯೋಗಾಶ್ರಮಕ್ಕೆ ಆಗಮಿಸಿದ ಮುಖ್ಯಮಂತ್ರಿ ಬೊಮ್ಮಾಯಿ, ಕೇಂದ್ರ ಸಚಿವ ಜೋಶಿ ಶ್ರೀಗಳ ದರ್ಶನ ಪಡೆದರು.

 

ಬಳಿಕ ಕನ್ಹೇರಿ ಕಾಡಸಿದ್ದೇಶ್ವರ ಮಠದ ಶ್ರೀಗಳು, ಜ್ಞಾನಯೋಗಾಶ್ರಮದ ಮುಖ್ಯಸ್ಥರಾದ ಬಸವಲಿಂಗ ಶ್ರೀಗಳೊಂದಿಗೆ ಸಿದ್ದೇಶ್ವರ ಶ್ರೀಗಳ ಆರೋಗ್ಯದ ಸ್ಥಿತಿಗತಿ ಬಗ್ಗೆ ಚರ್ಚೆ ನಡೆಸಿದರು.

ನಂತರ ಸಿದ್ದೇಶ್ವರ ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ತಂಡದೊಂದಿಗೂ ಚರ್ಚೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶ್ರೀಗಳ ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಲು ಸೂಚಿಸಿದರು.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ