Breaking News

ಖಾನಾಪುರ ಗೊವಾ ಸಂಪಕ೯ ಕಲ್ಪಿಸುವ ರಸ್ತೆಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕಿ ಆಕ್ರೋಶ

Spread the love

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂಕೆ ಹುಬ್ಬಳ್ಳಿಯಿಂದ ಪಾರಿಶ್ವಾಡ ಖಾನಾಪುರ ಗೊವಾ ಸಂಪಕ೯ ಕಲ್ಪಿಸುವ ಲೊಕೂಪಯೂಗಿ ಇಲಾಖೆಗೆ ಬರುವ ರಸ್ತೆ ಮಂಜೂರಾಗಿದ್ದು ಎಂಜಿನಿಯರ್ ಮತ್ತು ಗುತ್ತಿಗೆದಾರನ ಬೇಜವಾಬ್ದಾರಿಯಿಂದ ಯಾವುದೇ ಮುನ್ಸೂಚನೆ ಫಲಕ ಇಲ್ಲದೆ ತುಂಬಾ ತಗ್ಗು ಗುಂಡಿಗಳಿಂದ ತುಂಬಿದ್ದು ವಾಹನ ಸವಾರರು ಹಾಗೂ ರೈತರು ಕಾಖಾ೯ನೆಗೆ ಕಬ್ಬು ತುಂಬಿದ ವಾಹನಗಳನ್ನು ಸಾಗಿಸಲು ಕೈಯಲ್ಲಿ ಜೀವ ಹಿಡಿದು ಹರ ಸಾಹಸ ಪಡಬೇಕಾಗಿದೆ.

ವಾಹನ ಸವಾರರು ಸಂಬಂಧಪಟ್ಟ ಇಲಾಖೆ ಹಾಗೂ ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕಿ ಸಾಗುವಂತಾಗಿದೆ ಚರಂಡಿ ನಿರು ರಸ್ತೆ ಮೇಲೆ ಹರಿಯುತ್ತಿರುವದರಿಂದ ತೆಗ್ಗುಗಳು ಸಂಪೂರ್ಣ ಜಲಾವೃತ ಆಗಿದ್ದರಿಂದ ತೆಗ್ಗಿನ ಆಳ ಗೊತ್ತಾಗದೆ ದ್ವೀಚಕ್ರ ವಾಹನ ಸವಾರರು ಇಲ್ಲಿ ಬಿದ್ದಿರುವ ಉದಾಹರಣೆ ಇವೇ. 

ಸ್ಥಳಿಯರಾದ ಸಮಾಜ ಸೇವಕ ರಾಜಶೇಖರ ಹಿಂಡಲಗಿ ಆಕ್ರೋಶ ವ್ಯಕ್ತಪಡಿಸಿದರು ಇನ್ನಾದರೂ ಈ ರಸ್ತೆಗೆ ಕಾಯಕಲ್ಪ ಸಿಗುವದಾ ಎಂದು ಕಾದು ನೊಡಬೇಕಾಗಿದೆ.

ಈ ಸಂದರ್ಭದಲ್ಲಿ ವಾಹನ ಚಾಲಕರಾದ ರಾಘವೇಂದ್ರ ಛಲವಾದಿ ಸ್ಥಳೀಯರಾದ ಪ್ರಾಣೇಶ ಕೊಡ್ಲಿ,ರೈತ ಮುಖಂಡರಾದ ಶಂಕರ ಗಡಾದ,ಶಿವಪ್ಪ ಸವನೂರ ಬಸವಾರಜ ಉಪಸ್ಥಿತರಿದ್ದರು


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ