Breaking News

ಬೆಂಗಳೂರು-ಧಾರವಾಡ ನಡುವಿನ ವಂದೇ ಭಾರತ್ ರೈಲು ಬೆಳಗಾವಿವರೆಗೂ ವಿಸ್ತರಣೆ

Spread the love

ಬೆಂಗಳೂರು ಮತ್ತು ಧಾರವಾಡ ನಡುವೆ ಮಾರ್ಚ್- ಏಪ್ರಿಲ್ ನಲ್ಲಿ ಸಂಚಾರ ಆರಂಭಿಸಲಿರುವ ವಂದೇ ಭಾರತ್ ರೈಲನ್ನು ಬೆಳಗಾವಿವರೆಗೂ ವಿಸ್ತರಣೆ ಆಗಲಿದೆ.

ನೈಋತ್ಯ ವಲಯದ ರೈಲ್ವೆ ಜನರಲ್ ಮ್ಯಾನೇಜರ್ ಸಂಜೀವ್ ಕಿಶೋರ್ ಹುಬ್ಬಳ್ಳಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

22 ಹೊಸತು ಸೇರಿದಂತೆ 210 ಕಿ.ಮೀ. ರೈಲು ಜೋಡಿ ಮಾರ್ಗ ಸಂಪೂರ್ಣಗೊಂಡಿದೆ. ಬೆಳಗಾವಿ ನಡುವಿನ ರೈಲು ಜೋಡಿ ಮಾರ್ಗ ಕಾಮಗಾರಿ ಪ್ರಗತಿಯಲ್ಲಿದೆ. ಇದು ಪೂರ್ಣಗೊಂಡ ಕೂಡಲೇ ವಂದೇ ಭಾರತ್ ರೈಲನ್ನು ಬೆಳಗಾವಿ ವರೆಗೂ ವಿಸ್ತರಿಸಲಾಗುವುದು ಎಂದು ಅವರು ತಿಳಿಸಿದರು.

ಪ್ರಸ್ತುತ ನೈರುತ್ಯ ವಲಯದಲ್ಲಿ 252 ರೈಲುಗಳು ಸಂಚರಿಸುತ್ತಿದ್ದು, ಹಬ್ಬ, ರಜಾದಿನಗಳಲ್ಲಿ ಪ್ರಯಾಣಿಕರ ಸಂಖ್ಯೆ ಗಮನಿಸಿ ಬೋಗಿಗಳ ಸಂಖ್ಯೆ 224ರವರೆಗೂ ಹೆಚ್ಚಿಸಲಾಗುತ್ತಿದೆ ಎಂದು ಅವರು ಹೇಳಿದರು.

ಒಂದು ವರ್ಷದಲ್ಲಿ 712 ಕಿ.ಮೀ.ದೂರದವರೆಗೆ ರೈಲ್ವೆ ಮಾರ್ಗದಲ್ಲಿ ಎಲೆಕ್ಟ್ರಿಕ್ ಕೆಲಸಗಳು ಪೂರ್ಣಗೊಂಡಿವೆ. ಶೇ.94ರಷ್ಟು ರೈಲುಗಳು ಸಮಯ ಪಾಲನೆ ಮಾಡುತ್ತಿದ್ದು, ದೇಶದಲ್ಲಿ ಮೂರನೇ ಸ್ಥಾನ ಪಡೆದಿದೆ. ರೈಲುಗಳ ಸಂಚಾರದ ವೇಗ ಶೇ.58ರಷ್ಟು ವೃದ್ಧಿಸಿದೆ. ಈ ಭಾಗದಲ್ಲಿ 2534 ಕೋಟಿ ರೂ. ಆದಾಯ ಗಳಿಸಿದೆ ಎಂದು ಅವರು ಹೇಳಿದರು.


Spread the love

About Laxminews 24x7

Check Also

ಬೆಂಗಳೂರಲ್ಲಿ ಭೀಕರ ಅಪಘಾತ – ಇಬ್ಬರು ಸ್ಥಳದಲ್ಲೇ ಸಾವು

Spread the loveಬೆಂಗಳೂರು: ಇಲ್ಲಿನ ಗೊರಗುಂಟೆಪಾಳ್ಯದ ಟಿಎಂಟಿ ಜಂಕ್ಷನ್ ಬಳಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ