Home / ರಾಜಕೀಯ / ಶೀಘ್ರದಲ್ಲಿಯೇ ಸಚಿವ ಸಂಪುಟ ವಿಸ್ತರಣೆ :ಬೊಮ್ಮಾಯಿ

ಶೀಘ್ರದಲ್ಲಿಯೇ ಸಚಿವ ಸಂಪುಟ ವಿಸ್ತರಣೆ :ಬೊಮ್ಮಾಯಿ

Spread the love

ಚಿತ್ರದುರ್ಗ: ಶೀಘ್ರದಲ್ಲಿಯೇ ಸಚಿವ ಸಂಪುಟ ವಿಸ್ತರಣೆಯಾಗುವ ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಚಿತ್ರದುರ್ಗದಲ್ಲಿ ಎಸ್.ಜೆ.ಎಂ ಆಂಗ್ಲ ಮಾಧ್ಯಮ ಶಾಲೆ ಹೆಲಿಪ್ಯಾಡ್ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ವರಿಷ್ಠರೊಂದಿಗೆ ವಿಸ್ತೃತ ಚರ್ಚೆ ಆಗಿದೆ ಎಂದರು.

 

ನನಗೆ ಬಂದಿರುವ ಮಾಹಿತಿ ಪ್ರಕಾರ ಆದಷ್ಟೂ ಬೇಗ ಒಂದು ಸಭೆ ನಡೆಸಿ ಈ ಬಗ್ಗೆ ತೀರ್ಮಾನವಾಗಲಿದೆ. ಶೀಘ್ರದಲ್ಲಿ ಆಗುವ ನಿರೀಕ್ಷೆ ಇದೆ. ಸಚಿವ ಸಂಪುಟಕ್ಕೆ ಯಾರೆಲ್ಲಾ ಸೇರ್ಪಡೆಯಾಗುತ್ತಾರೆ ಎನ್ನುವುದು ಹೈಕಮಾಂಡ್ ತೀರ್ಮಾನ ಮಾಡಲಿದೆ. ವಿಚಾರಗಳನ್ನು ವರಿಷ್ಠರಿಗೆ ಮನವರಿಕೆ ಮಾಡಲಾಗಿದೆ. ಸಾಮಾಜಿಕ, ಪ್ರಾದೇಶಿಕ ಪ್ರಾತಿನಿಧ್ಯ ಎಲ್ಲಾ ವಿಚಾರಗಳು ಇವುಗಳ ಬಗ್ಗೆ ಚರ್ಚೆಯಾಗಿದ್ದು ಶೀಘ್ರದಲ್ಲಿ ವಿಸ್ತರಣೆ ಆಗುವ ನಿರೀಕ್ಷೆಯಿದೆ ಎಂದರು.


Spread the love

About Laxminews 24x7

Check Also

ಅಧಿಕಾರಿಗಳ ಭರವಸೆ: ಧರಣಿ ಅಂತ್ಯ.

Spread the love ರಾಮದುರ್ಗ: ಗ್ರಾಮ ಪಂಚಾಯ್ತಿಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಹಣವನ್ನು ಸಂಬಂಧಿಸಿದ ಅಧಿಕಾರಿಗಳಿಂದ ಸರ್ಕಾರಕ್ಕೆ ಭರಿಸುವ ಭರವಸೆಯನ್ನು ತಾಲ್ಲೂಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ