Breaking News

ಬೆಂಗಳೂರು: ಯಾವುದೇ ವೃಂದದ ಹುದ್ದೆಗಳಿಗೆ 20 ಸಾವಿರಕ್ಕಿಂತಲೂ ಕಡಿಮೆ ಅರ್ಜಿಗಳು ಸಲ್ಲಿಕೆಯಾದರೆ ಅಭ್ಯರ್ಥಿಗಳ ಆಯ್ಕೆಗೆ ಇನ್ನು ಮುಂದೆ ‘ಕಂಪ್ಯೂಟರ್‌ ಆಧಾರಿತ ಲಿಖಿತ ಪರೀಕ್ಷೆ’ (ಸಿಬಿಆರ್‌ಟಿ) ನಡೆಸಲು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಿರ್ಧರಿಸಿದೆ. ‘ಸಿಬಿಆರ್‌ಟಿ ಮಾದರಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸಬೇಕೆಂಬ ಉದ್ದೇಶದಿಂದ ಜ.7 ರಂದು ಸಿಬಿಆರ್‌ಟಿ ಅಣಕು ಪರೀಕ್ಷೆ ನಡೆಸಲಾಗಿತ್ತು. ಪ್ರಾಯೋಗಿಕವಾಗಿ ನಡೆಸಿದ ಈ ಪರೀಕ್ಷೆ ಯಶಸ್ವಿಯಾಗಿದೆ. ಹೀಗಾಗಿ, ಈ ಮಾದರಿಯನ್ನು ಅಳವಡಿಸಿಕೊಳ್ಳಲು ತೀರ್ಮಾನಿಸಲಾಗಿದೆ’ ಎಂದು ಕೆಪಿಎಸ್‌ಸಿ ಕಾರ್ಯದರ್ಶಿ ವಿಕಾಸ್‌ ಕಿಶೋರ್‌ ಸುರಳ್ಕರ್‌ ತಿಳಿಸಿದರು. ಡಿ. 3 ರಂದು ನಡೆದ ಆಯೋಗದ ಸಭೆಯಲ್ಲಿ ನಿರ್ಣಯಿಸಿದಂತೆ, ಸಿಬಿಆರ್‌ಟಿ ಅಣಕು ಪರೀಕ್ಷೆ ನಡೆಸಲು ಡಿ.22 ರಂದು ಅಧಿಸೂಚನೆ ಹೊರಡಿಸಲಾಗಿತ್ತು.

Spread the love

ಬೆಂಗಳೂರು: ಯಾವುದೇ ವೃಂದದ ಹುದ್ದೆಗಳಿಗೆ 20 ಸಾವಿರಕ್ಕಿಂತಲೂ ಕಡಿಮೆ ಅರ್ಜಿಗಳು ಸಲ್ಲಿಕೆಯಾದರೆ ಅಭ್ಯರ್ಥಿಗಳ ಆಯ್ಕೆಗೆ ಇನ್ನು ಮುಂದೆ ‘ಕಂಪ್ಯೂಟರ್‌ ಆಧಾರಿತ ಲಿಖಿತ ಪರೀಕ್ಷೆ’ (ಸಿಬಿಆರ್‌ಟಿ) ನಡೆಸಲು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಿರ್ಧರಿಸಿದೆ.

 

‘ಸಿಬಿಆರ್‌ಟಿ ಮಾದರಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸಬೇಕೆಂಬ ಉದ್ದೇಶದಿಂದ ಜ.7 ರಂದು ಸಿಬಿಆರ್‌ಟಿ ಅಣಕು ಪರೀಕ್ಷೆ ನಡೆಸಲಾಗಿತ್ತು. ಪ್ರಾಯೋಗಿಕವಾಗಿ ನಡೆಸಿದ ಈ ಪರೀಕ್ಷೆ ಯಶಸ್ವಿಯಾಗಿದೆ. ಹೀಗಾಗಿ, ಈ ಮಾದರಿಯನ್ನು ಅಳವಡಿಸಿಕೊಳ್ಳಲು ತೀರ್ಮಾನಿಸಲಾಗಿದೆ’ ಎಂದು ಕೆಪಿಎಸ್‌ಸಿ ಕಾರ್ಯದರ್ಶಿ ವಿಕಾಸ್‌ ಕಿಶೋರ್‌ ಸುರಳ್ಕರ್‌ ತಿಳಿಸಿದರು.

ಡಿ. 3 ರಂದು ನಡೆದ ಆಯೋಗದ ಸಭೆಯಲ್ಲಿ ನಿರ್ಣಯಿಸಿದಂತೆ, ಸಿಬಿಆರ್‌ಟಿ ಅಣಕು ಪರೀಕ್ಷೆ ನಡೆಸಲು ಡಿ.22 ರಂದು ಅಧಿಸೂಚನೆ ಹೊರಡಿಸಲಾಗಿತ್ತು.


Spread the love

About Laxminews 24x7

Check Also

ವಿಜಯಪುರ ಜಿಲ್ಲೆಯ ಅಭಿವೃದ್ಧಿಯ ಕನಸು ನನಸು ಮಾಡಲು ಬದ್ಧ ಎಂದ ಸಿಎಂ; ಯುಕೆಪಿ, ಸರ್ಕಾರಿ ಮೆಡಿಕಲ್ ಕಾಲೇಜು ಸೇರಿ ಹಲವು ವಿಚಾರಗಳನ್ನು ಪ್ರಸ್ತಾಪಿಸಿದ ಸಿಎಂ ಸಿದ್ದರಾಮಯ್ಯ

Spread the love ವಿಜಯಪುರ ಜಿಲ್ಲೆಯ ಅಭಿವೃದ್ಧಿಯ ಕನಸು ನನಸು ಮಾಡಲು ಬದ್ಧ ಎಂದ ಸಿಎಂ; ಯುಕೆಪಿ, ಸರ್ಕಾರಿ ಮೆಡಿಕಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ