Breaking News

₹4 ಸಾವಿರ ಕೋಟಿ ಆಸ್ತಿ ಜಪ್ತಿಯಾಗಿದ್ದರೂ ಚುನಾವಣೆ ಖರ್ಚಿಗೆ ಯಾವುದೇ ಕಷ್ಟವಿಲ್ಲ’ ಎಂದ: ಜನಾರ್ದನ ರೆಡ್ಡಿ

Spread the love

ಗಂಗಾವತಿ (ಕೊಪ್ಪಳ ಜಿಲ್ಲೆ): ‘ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಹೊಸ ಪಕ್ಷ ಸ್ಥಾಪಿಸಿ 16 ದಿನಗಳಾಗುವಷ್ಟರಲ್ಲಿಯೇ ಸಿಬಿಐ ಆಸ್ತಿ ಮುಟ್ಟುಗೋಲಿಗೆ ಮುಂದಾಗಿದ್ದು, ಇದು ಯಾರಿಂದಲೂ ಸಾಧ್ಯವಿಲ್ಲ’ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸ್ಥಾಪಕ ಜನಾರ್ದನ ರೆಡ್ಡಿ ಹೇಳಿದರು.

 

ಇಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿ ‘ಪಕ್ಷ ಸಂಘಟನೆ ಬಗ್ಗೆ ಸಾಮಾಜಿಕ ತಾಣಗಳಲ್ಲಿ ಜನರಿಗೆ ಮಾಹಿತಿ ನೀಡುತ್ತಿದ್ದೇನೆ. ಕೆಲವರು ಅವುಗಳನ್ನೇ ಹ್ಯಾಕ್‌ ಮಾಡಿಸಿ ಚುನಾವಣಾ ತಯಾರಿಗೆ ಅಡ್ಡಿಪಡಿಸಲು ಪ್ರಯತ್ನಿಸುತ್ತಿದ್ದಾರೆ. ಜನರ ಪ್ರೀತಿ ಇರುವ ತನಕ ನನ್ನನ್ನು ಏನೂ ಮಾಡಲು ಆಗುವುದಿಲ್ಲ’ ಎಂದರು.

‘ಬಂಧನದ ವೇಳೆ ಸಿಬಿಐ ನನ್ನಿಂದ ₹1,020ಕೋಟಿ ಜಪ್ತಿ ಮಾಡಿ ಪ್ರಕರಣ ದಾಖಲಿಸಿತ್ತು. ಸದ್ಯ ₹4 ಸಾವಿರ ಕೋಟಿ ಆಸ್ತಿ ಜಪ್ತಿಯಾಗಿದ್ದರೂ ಚುನಾವಣೆ ಖರ್ಚಿಗೆ ಯಾವುದೇ ಕಷ್ಟವಿಲ್ಲ’ ಎಂದರು.

‘ಯಾರನ್ನೂ ಹೆದರಿಸಿ ದುಡ್ಡು ಹೊಡೆದಿಲ್ಲ. ಸ್ವಂತ ಶ್ರಮದಿಂದ ಗಳಿಸಿದ ಆಸ್ತಿ ಅದು. ಜೈಲಿನಲ್ಲಿ ಕಿರಿದಾದ ಕೊಠಡಿಯಲ್ಲಿ ನಾಲ್ಕು ವರ್ಷ ವನವಾಸ ಕಳೆದು ಬಂದಿದ್ದು, ಯಾರಿಗೂ ಹೆದರುವುದಿಲ್ಲ. ಅಕ್ರಮ ಆಸ್ತಿ ಪ್ರಕರಣದ ಆರೋಪದಿಂದ ಮುಕ್ತನಾಗುವೆ. ನಂತರವೇ ಉಸಿರು ಬಿಡುವೆ’ ಎಂದು ಹೇಳಿದರು.


Spread the love

About Laxminews 24x7

Check Also

ಗವರ್ನರ್ V/S ಗವರ್ನಮೆಂಟ್‌: ಭಾಷಣದ ಕೆಲ ಸಾಲು ಬದಲಾವಣೆಗೆ ನಿರ್ಧಾರ; ಒಪ್ಪದಿದ್ದರೆ ಕಾನೂನು ಹೋರಾಟವೆಂದ ಸರ್ಕಾರ

Spread the loveಬೆಂಗಳೂರು: ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ನಡುವೆ ಸಂಘರ್ಷ ಶುರುವಾದಂತಿದೆ‌. ಇಂದು ವಿಶೇಷ ಅಧಿವೇಶನಕ್ಕಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ