Breaking News
Home / ಹುಬ್ಬಳ್ಳಿ / ಸ್ವಾಮಿ ವಿವೇಕಾನಂದರ ಸ್ಫೂರ್ತಿಯಿಂದ ದೇಶ ಮುಂದಕ್ಕೆ ಕೊಂಡೊಯ್ಯಬೇಕು: ಹುಬ್ಬಳ್ಳಿಯಲ್ಲಿ ಪ್ರಧಾನಿ ಮೋದಿ

ಸ್ವಾಮಿ ವಿವೇಕಾನಂದರ ಸ್ಫೂರ್ತಿಯಿಂದ ದೇಶ ಮುಂದಕ್ಕೆ ಕೊಂಡೊಯ್ಯಬೇಕು: ಹುಬ್ಬಳ್ಳಿಯಲ್ಲಿ ಪ್ರಧಾನಿ ಮೋದಿ

Spread the love

ಹುಬ್ಬಳ್ಳಿ: ಸ್ವಾಮಿ ವಿವೇಕಾನಂದರಿಂದ ಸ್ಫೂರ್ತಿ ಪಡೆದು ತಮ್ಮ ಪ್ರಯತ್ನ ಮತ್ತು ಜವಾಬ್ದಾರಿಗಳ ಮೂಲಕ ಅಮೃತ ಕಾಲದ ಸಮಯದಲ್ಲಿ ಭಾರತವನ್ನು ಮುಂದಕ್ಕೆ ಕೊಂಡೊಯ್ಯುವುದು ಭಾರತೀಯ ಯುವಕರ ಮಂತ್ರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

 

26 ನೇ ರಾಷ್ಟ್ರೀಯ ಯುವ ಜನೋತ್ಸವ ಉದ್ಘಾಟನೆ ನಡೆಸಿ ಮಾತನಾಡಿ, 2023 ರ ರಾಷ್ಟ್ರೀಯ ಯುವ ದಿನದ ಈ ದಿನ ಬಹಳ ವಿಶೇಷವಾಗಿದೆ. ಒಂದೆಡೆ ಈ ಶಕ್ತಿ ಹಬ್ಬ ಮತ್ತೊಂದೆಡೆ ಸ್ವಾತಂತ್ರ್ಯದ ಅಮೃತ ಮಹೋತ್ಸವ. ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ. ವಿವೇಕಾನಂದರ ಈ ಘೋಷಣೆಯು ಭಾರತದ ಯುವಜನತೆಯ ಜೀವನ ಮಂತ್ರವಾಗಿದೆ ಎಂದರು.

ಇದು ಭಾರತದ ಶತಮಾನ, ನಿಮ್ಮ ಶತಮಾನ, ಭಾರತದ ಯುವಕರ ಶತಮಾನ ಎಂದು ಜಾಗತಿಕ ಧ್ವನಿಗಳು ಹೇಳುತ್ತವೆ. ಜಾಗತಿಕ ಸಮೀಕ್ಷೆಗಳು ಹೇಳುವಂತೆ ಬಹುಪಾಲು ದೊಡ್ಡ ಹೂಡಿಕೆದಾರರು ಭಾರತದಲ್ಲಿ ಹೂಡಿಕೆ ಮಾಡಲು ಬಯಸುತ್ತಾರೆ ಮತ್ತು ಈ ಹೂಡಿಕೆದಾರರು ಭಾರತದ ಯುವಜನತೆಯಲ್ಲಿ ನಿಮ್ಮಲ್ಲಿ ಹೂಡಿಕೆ ಮಾಡಲು ಬಯಸುತ್ತಿದ್ದಾರೆ ಎಂದರು.


Spread the love

About Laxminews 24x7

Check Also

ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ – ಧಾರವಾಡ ಅರ್ಧ ದಿನ ಬಂದ್!

Spread the loveಧಾರವಾಡ: ಇಡೀ ದೇಶದ ಗಮನ ಸೆಳೆದಿರುವ ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಖಂಡಿಸಿ ಇಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ