Breaking News

ಉಪೇಂದ್ರ ನಿರ್ದೇಶನದ ‘ಯುಐ’ ಚಿತ್ರತಂಡದಿಂದ ಸಂಕ್ರಾಂತಿಗೆ ಡಿಫರೆಂಟ್ ವಿಷ್!

Spread the love

ಬೆಂಗಳೂರು: ಯಾವಾಗಲೂ ತನ್ನ ವೈಶಿಷ್ಟ್ಯದೊಂದಿಗೇ ಗಮನ ಸೆಳೆಯುವ ನಟ-ನಿರ್ದೇಶಕ ಉಪೇಂದ್ರ, ಇದೀಗ ತಮ್ಮ ನಿರ್ದೇಶನದ ಹೊಸ ಸಿನಿಮಾ ‘ಯುಐ’ ತಂಡದಿಂದ ಸಂಕ್ರಾಂತಿ ಶುಭಾಶಯ ಕೋರುವುದರಲ್ಲೂ ಡಿಫರೆಂಟ್ ಎನಿಸಿಕೊಂಡಿದ್ದಾರೆ.

ರಿಯಲ್​ ಸ್ಟಾರ್ ಉಪೇಂದ್ರ ನಿರ್ದೇಶನದ ಸಿನಿಮಾದ ಟೈಟಲ್​ಗಳೇ ಡಿಫರೆಂಟ್ ಆಗಿರುತ್ತವೆ.

ಅದೇ ರೀತಿ ಅವರು ನಿರ್ದೇಶನ ಮಾಡುತ್ತಿರುವ ನೂತನ ಸಿನಿಮಾ ಹೆಸರೇ ‘ನಾಮ’ದ ರೂಪದಲ್ಲಿದ್ದು ಘೋಷಣೆ ಆದಾಗಲೇ ಭಾರಿ ಗಮನ ಸೆಳೆಯಲಾಗಿತ್ತು. ದೇವರ ನಾಮದ ರೂಪದಲ್ಲಿ ವಿನ್ಯಾಸ ಮಾಡಲಾಗಿರುವ ಈ ಚಿತ್ರದ ಶೀರ್ಷಿಕೆಯನ್ನು ‘ಯುಐ’ ಎಂದು ರಿಜಿಸ್ಟರ್​ ಮಾಡಿಕೊಂಡಿದ್ದರೂ ಅದನ್ನು ನಾನಾ ರೀತಿಯಲ್ಲಿ ವ್ಯಾಖ್ಯಾನಿಸಲಾಗುತ್ತಿದೆ.

ಈಗ ಇದೇ ಚಿತ್ರತಂಡದ ಮೂಲಕ ಮಕರ ಸಂಕ್ರಮಣದ ಶುಭಾಶಯವನ್ನು ಕೋರಲಾಗಿದ್ದು, ಆ ಕುರಿತ ವಿಶಿಷ್ಟವಾದ ಪೋಸ್ಟರನ್ನು ಉಪೇಂದ್ರ ಸೇರಿದಂತೆ ಚಿತ್ರತಂಡದವರು ಹಂಚಿಕೊಂಡಿದ್ದಾರೆ. ‘ಯುಐ’ ಎಂದಿರುವ ಈ ಚಿತ್ರದ ಟೈಟಲನ್ನು ‘ಯು’ ಅಕ್ಷರದೊಳಗೆ ‘ಐ’ ಅಕ್ಷರ ಬರುವಂತೆಯೂ ವಿನ್ಯಾಸ ಮಾಡಲಾಗಿದೆ. ಅದನ್ನೇ ಮಕರ ಸಂಕ್ರಾಂತಿಗೆ ಶುಭ ಹಾರೈಸುವಾಗ ಎಳ್ಳುಬೆಲ್ಲದಿಂದಲೇ ಯು ರಚಿಸಿ, ಕಬ್ಬಿನ ತುಂಡೊಂದನ್ನು ಐ ರೀತಿ ಇರಿಸಿ ವಿಶಿಷ್ಟವಾಗಿ ಶುಭ ಕೋರಲಾಗಿದೆ. ಹೀಗೆ ಸಂಕ್ರಾಂತಿಯ ಶುಭ ಕೋರುವಲ್ಲಿಯೂ ಕ್ರಿಯೇಟಿವಿಟಿಯನ್ನು ತೋರಿರುವುದು ಸೋಷಿಯಲ್ ಮೀಡಿಯಾದಲ್ಲಿ ಈಗ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ.


Spread the love

About Laxminews 24x7

Check Also

ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ ‌ತನಿಖೆಯನ್ನು ನಡೆಸಬೇಕೆಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘ ಪ್ರತಿಭಟನೆ

Spread the loveಬೆಳಗಾವಿ ;ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ