Breaking News
Home / ಜಿಲ್ಲೆ / ಚಾಮರಾಜ ನಗರ / ಚಾಮರಾಜನಗರಕ್ಕೆ ಬಿಗ್ ರಿಲೀಫ್: ಆತಂಕ ಹುಟ್ಟಿಸಿದ್ದ ಪೇದೆ ಕೊರೊನಾ ನೆಗೆಟಿವ್

ಚಾಮರಾಜನಗರಕ್ಕೆ ಬಿಗ್ ರಿಲೀಫ್: ಆತಂಕ ಹುಟ್ಟಿಸಿದ್ದ ಪೇದೆ ಕೊರೊನಾ ನೆಗೆಟಿವ್

Spread the love

ಚಾಮರಾಜನಗರ: ಬೆಂಗಳೂರಿನಿಂದ ಜಿಲ್ಲೆಯ ಹನೂರು ತಾಲೂಕಿನ ಬೆಳ್ತೂರು ಗ್ರಾಮಕ್ಕೆ ಬಂದು ಹೋಗಿದ್ದ ಪೇದೆಯ ಕೋವಿಡ್-19 ಟೆಸ್ಟ್ ರಿಪೋರ್ಟ್ ನೆಗೆಟಿವ್ ಎಂದು ಅಧಿಕೃತವಾಗಿ ಘೋಷಣೆಯಾಗಿದೆ. ಹೀಗಾಗಿ ಚಾಮರಾಜನಗರ ಜಿಲ್ಲೆಯ ಜನರ ಆತಂಕ ದೂರವಾಗಿದೆ.

ಬೇಗೂರು ಠಾಣೆಯ ಮುಖ್ಯಪೇದೆ ಕುಟುಂಬ ಸಮೇತ ಬೆಳ್ತೂರಿಗೆ ಬಂದಿದ್ದ ವೇಳೆ ಕೊರೊನಾ ಪಾಸಿಟಿವ್ ಸಂಬಂಧ ಹಲವಾರು ಗೊಂದಲಗಳು ಉಂಟಾಗಿದ್ದವು. ಆದರೆ ಈಗ ಅವರ ರಿಪೋರ್ಟ್ ನೆಗೆಟಿವ್ ಎಂದು ಬಂದಿದೆ. ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ 16 ಜನರನ್ನು ಹಾಗೂ ಸೆಕೆಂಡರಿ ಸಂಪರ್ಕದಲ್ಲಿದ್ದ 22 ಜನರನ್ನು ಚಾಮರಾಜನಗರದ ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿತ್ತು.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ಎಂ.ಆರ್.ರವಿ, ಕೊರೊನಾ ಶಂಕಿತ ಮುಖ್ಯ ಪೇದೆಯ ಪ್ರಾಥಮಿಕ ಸಂಪರ್ಕದಲ್ಲಿದ್ದ 16 ಜನರ ಗಂಟಲು ದ್ರವವನ್ನು ಮೈಸೂರಿನ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿತ್ತು. ಈಗ ಅದರ ವರದಿ ನೆಗೆಟಿವ್ ಎಂದು ಬಂದಿದೆ. ಉಳಿದ 22 ಜನರ ಫಲಿತಾಂಶದ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ನೆಗೆಟಿವ್ ಎಂದು ವರದಿ ಬಂದಿರುವ 16 ಜನರನ್ನು ಬೆಳ್ತೂರಿಗೆ ಕಳುಹಿಸಿಕೊಡಲಾಗುತ್ತಿದೆ. ಅವರಿಗೆ ಮನೆಯಲ್ಲೇ 14 ದಿನಗಳ ಕಾಲ ಕ್ವಾರಂಟೈನ್ ಇರುವಂತೆ ತಿಳಿಸಲಾಗಿದೆ ಎಂದರು.

ಇದಲ್ಲದೇ ಬೆಳ್ತೂರು ಗ್ರಾಮದಲ್ಲಿ ಆತಂಕ ಮನೆ ಮಾಡಿದ್ದ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಡಿಸಿ ಎಂ.ಆರ್.ರವಿ, ಎಸ್‍ಪಿ ಆನಂದ್ ಕುಮಾರ್, ಶಾಸಕ ನರೇಂದ್ರ ಭೇಟಿ ನೀಡಿದ ಗ್ರಾಮಸ್ಥರದಲ್ಲಿ ಆತ್ಮಸ್ಥೈರ್ಯ ತುಂಬಿದ್ದಾರೆ. ಪೊಲೀಸ್ ಪೇದೆ ಸೃಷ್ಟಿಸಿದ್ದ ಆತಂಕದಿಂದ ಗಡಿ ಜಿಲ್ಲೆ ನಿರಾಳವಾಗಿದ್ದು, ಕೊರೊನಾ ಮುಕ್ತ ಜಿಲ್ಲೆ ಎಂಬ ಹೆಗ್ಗಳಿಕೆಯನ್ನು ಚಾಮರಾಜನಗರ ಮತ್ತೆ ಮುಡಿಗೇರಿಸಿಕೊಂಡಿದೆ.


Spread the love

About Laxminews 24x7

Check Also

ಗುಂಡಿನ ಕಾಳಗದಲ್ಲಿ ಕಾಡುಗಳ್ಳ ವೀರಪ್ಪನ ಬೆವರಿಳಿಸಿದ ಪಿಎಸ್‌ಐ ಸಿದ್ದರಾಜನಾಯಕ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Spread the loveಚಾಮರಾಜನಗರ: ಗುಂಡಿನ ಕಾಳಗದಲ್ಲಿ ಕಾಡುಗಳ್ಳ ವೀರಪ್ಪನ ಬೆವರಿಳಿಸಿದ ಪಿಎಸ್‌ಐ ಸಿದ್ದರಾಜನಾಯಕ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಚಾಮರಾಜನಗರ ಪಟ್ಟಣ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ