Breaking News

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ಗೆ ವರಿಷ್ಠರ ಬುಲಾವ್‌

Spread the love

ಬೆಂಗಳೂರು: ಪಂಚಮಸಾಲಿ ಮೀಸಲು ಹೋರಾಟಕ್ಕೆ ಸಂಬಂಧಪಟ್ಟಂತೆ ರಾಜ್ಯ ನಾಯಕತ್ವದ ವಿರುದ್ಧವೇ ಸಿಡಿದು ನಿಂತಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ಗೆ ರಾಷ್ಟ್ರೀಯ ನಾಯಕರು ದಿಲ್ಲಿಗೆ ಬುಲಾವ್‌ ನೀಡಿದ್ದಾರೆ. ರಾಷ್ಟ್ರೀಯ ಕಾರ್ಯಕಾರಿಣಿ ಬಳಿಕ ದಿಲ್ಲಿಗೆ ಬರುವಂತೆ ಸೂಚಿಸಿದ್ದಾರೆ.

 

ಯತ್ನಾಳ್‌ಗೆ ಕಾರಣ ಕೇಳಿ ವರಿಷ್ಠರು ನೋಟಿಸ್‌ ನೀಡಿ ದ್ದಾರೆ ಎಂಬುದು ಸೋಮವಾರ ಬಿಜೆಪಿ ವಲಯದಲ್ಲಿ ಚರ್ಚೆ ನಡೆದಿತ್ತು. ಆದರೆ ವಿಜಯ ಪುರದಲ್ಲಿ ಖುದ್ದು ಯತ್ನಾಳ್‌ ಅವರೇ ಈ ಸಂಗತಿಯನ್ನು ನಿರಾಕರಿಸಿದ್ದಾರೆ. ಆ ಬಳಿಕ ನಡೆದ ಬೆಳವಣಿಗೆಯಲ್ಲಿ ವರಿಷ್ಠರೇ ಯತ್ನಾಳ್‌ಗೆ ದಿಲ್ಲಿಗೆ ಬರು ವಂತೆ ಸೂಚಿಸಿದ್ದಾರೆೆ ಎಂದು ತಿಳಿದು ಬಂದಿದೆ.

ರವಿವಾರ ಸುದ್ದಿಗಾರರ ಜತೆ ಮಾತನಾಡಿದ ಯತ್ನಾಳ್‌ ಈ ವಿಷಯ ತಿಳಿಸಿದ್ದಾರೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ