Breaking News

ಅವರಿಗಿಂತ 10 ಕೋಟಿ ರೂ. ಹೆಚ್ಚು ಖರ್ಚು ಮಾಡೋಣ: ಬಹಿರಂಗ ಸಭೆಯಲ್ಲಿ ರಮೇಶ್ ಜಾರಕಿಹೊಳಿ

Spread the love

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಯಾವುದೇ ಪರಿಸ್ಥಿತಿಯಲ್ಲಿ ಈ ಬಾರಿ ಕಾಂಗ್ರೆಸ್ ಸೋಲಿಸಲೇಬೇಕು. ಇದಕ್ಕಾಗಿ ಅವರು 3 ಸಾವಿರ ರೂ. ಗಿಫ್ಟ್ ಕೊಟ್ಟರೆ ನಾವು 6 ಸಾವಿರ ರೂ. ಗಿಫ್ಟ್ ಕೊಡುತ್ತೇವೆ. ಅವರು ಖರ್ಚು ಮಾಡಿದ್ದಕ್ಕಿಂತ 10 ಕೋಟಿ ರೂ. ಹೆಚ್ಚು ಖರ್ಚು ಮಾಡುತ್ತೇವೆ ಎಂದು ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

 

ಸುಳೇಬಾವಿಯಲ್ಲಿ ಶುಕ್ರವಾರ ಸಂಜೆ ನಡೆದ ರಮೇಶ ಜಾರಕಿಹೊಳಿ ಅಭಿಮಾನಿಗಳ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.

ನಾವು ಮೊದಲು ಸಂಘಟನೆ ಮಾಡಿ ನಂತರ ಗಿಫ್ಟ್ ಕೊಡುತ್ತೇವೆ. ಅವರು 3 ಸಾವಿರ ರೂ. ಗಿಫ್ಟ್ ಕೊಟ್ಟರೆ, ನಾವು 6 ಸಾವಿರದ್ದು ಕೊಟ್ಟರೆ ಮಾತ್ರ ನಮಗೆ ಓಟ್ ಕೊಡಿ ಎಂದು ಹೇಳಿದರು.

ಅವರು ಕೊಡುವ ಗಿಫ್ಟನ್ನು ಕಡೆಗಣಿಸಿ ಇಲ್ಲಿ ಜನರು ಸಮಾವೇಶಕ್ಕೆ ಬಂದಿದ್ದಾರೆ. ಇಂತವರನ್ನು ಪಡೆದ ನಾನೇ ಧನ್ಯ ಎಂದ ರಮೇಶ ಜಾರಕಿಹೊಳಿ, ನಾನು ಮಾಜಿ ಆದ ನಂತರ ಅವರ ನಿಜವಾದ ಬಣ್ಣ ಗೊತ್ತಾಯಿತು. ನಾನು ಮಾಜಿ ಆಗದಿದ್ದರೆ ಅವರ ಗುಣ ಗೊತ್ತಾಗುತ್ತಿರಲಿಲ್ಲ, ಮಾಜಿ ಆದರೆ ನಾನು ಮನೆಗೆ ಹೋಗುತ್ತೇನೆ ಎಂದು ತಿಳಿದಿದ್ದರು. ಆದರೆ ಇದು ಜಾರಕಿಹೊಳಿ ಕುಟುಂಬ, ಎಂದಿಗೂ ಮನೆಗೆ ಹೋಗುವುದಿಲ್ಲ ಎಂದರು.


Spread the love

About Laxminews 24x7

Check Also

ಗ್ರಾಹಕ ನ್ಯಾಯಾಲಯಕ್ಕೆ ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವನ್ನಪ್ಪಿದರೆ, ಗೋಕಾಕ್ ಜಾತ್ರೆ ಬಂದೋಬಸ್ತ್​​ಗೆ ಬಂದಿದ್ದ ಹುಬ್ಬಳ್ಳಿ ಎಎಸ್ಐ ಹೃದಯಾಘಾತದಿಂದ ನಿಧನ

Spread the loveಬೆಂಗಳೂರು/ ಗ್ರಾಹಕ ನ್ಯಾಯಾಲಯಕ್ಕೆ ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವನ್ನಪ್ಪಿದರೆ, ಗೋಕಾಕ್ ಜಾತ್ರೆ ಬಂದೋಬಸ್ತ್​​ಗೆ ಬಂದಿದ್ದ ಹುಬ್ಬಳ್ಳಿ ಎಎಸ್ಐ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ