Breaking News

ಸಂಚಲನ ಉಂಟು ಮಾಡಿದ ಪಿಎಸ್‌ಐ ಪರೀಕ್ಷಾ ಅಕ್ರಮ ಕಿಂಗ್ ಪಿನ್ ಆರ್.ಡಿ.ಪಾಟೀಲ್ ವಿಡಿಯೋ!

Spread the love

ಕಲಬುರಗಿ: ಪಿಎಸ್‌ಐ ಅಕ್ರಮ ನೇಮಕಾತಿ ಹಗರಣದ ಪ್ರಮುಖ ಆರೋಪಿ ಆರ್.ಡಿ.ಪಾಟೀಲ ಗುರುವಾರ ರಾತ್ರಿ ಮನೆಯಿಂದ ಪರಾರಿಯಾದ ಬೆನ್ನಲ್ಲೇ ಅಜ್ಞಾತ ಸ್ಥಳದಿಂದ ವಿಡಿಯೋ ಒಂದನ್ನು ಹರಿಬಿಟ್ಟಿದ್ದಾರೆ.

ಜನ ಬಯಸಿದರೆ 2000 23ರ ಚುನಾವಣೆಯಲ್ಲಿ ತಾವು ಕಣಕ್ಕಿಳಿಯಲು ತಯಾರಾಗಿದ್ದೇನೆ ಎನ್ನುವ ಸಂದೇಶವನ್ನು ರವಾನೆ ಮಾಡುವ ಮೂಲಕ ಅಫ್ಜಲ್ಪುರ ವಿಧಾನಸಭಾ ಕ್ಷೇತ್ರವಲ್ಲದೆ ರಾಜ್ಯದಲ್ಲಿ ಹೊಸ ಸಂಚಲನ ಉಂಟು ಮಾಡಿದ್ದಾರೆ.

ವಿಡಿಯೋದಲ್ಲಿ ತಮ್ಮ ಅಭಿಮಾನಿ ಕುಲಕ್ಕೆ ನಮಸ್ಕಾರ ಹೇಳಿರುವ ರುದ್ರಗೌಡ ಪಾಟೀಲ, ‘ರಾಜಕೀಯ ಕುತಂತ್ರ ಮಾಡಿ ಪಿಎಸ್‌ಐ ನೇಮಕಾತಿ ಪ್ರಕರಣದಲ್ಲಿ ನನ್ನನ್ನು ಹಾಗೂ ಸಹೋದರ ಮಹಾಂತೇಶ ಪಾಟೀಲ ಅವರನ್ನು ಸಿಲುಕಿಸಲಾಗಿದೆ. ಕೆಲ ಸಿಐಡಿ ಅಧಿಕಾರಿಗಳು ರಾಜಕೀಯ ಮುಖಂಡರ ಕೈಗೊಂಬೆಯಾಗಿ ವರ್ತಿಸಿದಾರೆ. ನನ್ನನ್ನು ಸಂಪೂರ್ಣವಾಗಿ ಮುಗಿಸುವ ಕುತಂತ್ರ ಹೆಣೆದಿದ್ದಾರೆ. ಅಫಜಲಪುರ ಕ್ಷೇತ್ರದ ಜನರು ಬಯಸಿದರೆ, ಮುಂಬರುವ 2023ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವೆ’ ಎಂದು ಹೇಳಿದ್ದಾರೆ. ಈ ವಿಡಿಯೋ ರಾತೋರಾತ್ರಿ ದೊಡ್ಡ ಸಂಚಲನೆ ಉಂಟುಮಾಡಿದೆ.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ