Breaking News

ವಿಧ ಇಲಾಖೆಗಳಲ್ಲಿನ ಭ್ರಷ್ಟಾಚಾರದ ಆರೋಪದ ಕುರಿತು ಕಾಂಗ್ರೆಸ್‌ನಿಂದ ಬೆಂಗಳೂರಿನ 300 ಸ್ಥಳಗಳಲ್ಲಿ ನಾಳೆ ಪ್ರತಿಭಟನೆ

Spread the love

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಭ್ರಷ್ಟಾಚಾರದ ಆರೋಪದ ಕುರಿತು ಕ್ರಮಕ್ಕೆ ಆಗ್ರಹಿಸಿ ಬೆಂಗಳೂರಿನ 300 ಸ್ಥಳಗಳಲ್ಲಿ ಕಾಂಗ್ರೆಸ್ ಸೋಮವಾರ ಪ್ರತಿಭಟನೆ ನಡೆಸಲಿದೆ.

ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ ಅವರೊಂದಿಗೆ ಭಾನುವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಎನ್.ಎ.‌ಹ್ಯಾರಿಸ್, ‘ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಹಾಸುಹೊಕ್ಕಾಗಿದೆ.

ಆರೋಪಗಳು ಬಂದರೂ ಕ್ರಮ ಕೈಗೊಳ್ಳುತ್ತಿಲ್ಲ. ಸರ್ಕಾರದಲ್ಲಿನ ಭ್ರಷ್ಟಾಚಾರದ ವಿರುದ್ಧ ಜನಜಾಗೃತಿ ಮೂಡಿಸುವುದಕ್ಕಾಗಿ ಬೆಂಗಳೂರಿನ 51 ಮೆಟ್ರೊ ರೈಲು ನಿಲ್ದಾಣಗಳು, 26 ಮೇಲುಸೇತುವೆಗಳು, 200 ಟ್ರಾಫಿಕ್ ಸಿಗ್ನಲ್ ಗಳು ಸೇರಿದಂತೆ 300 ಸ್ಥಳಗಳಲ್ಲಿ ಪ್ರತಿಭಟನೆ ನಡೆಸಲಾಗುವುದು’ ಎಂದರು.


Spread the love

About Laxminews 24x7

Check Also

ಗೋವಾದಲ್ಲಿ ಎಮ್ಮೆಗೆ ಡಿಕ್ಕಿಯಾದ ಕಾರವಾರದ ವೈದ್ಯ ವಿದ್ಯಾರ್ಥಿಗಳ ಬೈಕ್: ಓರ್ವ ಸಾವು, ಇನ್ನೋರ್ವನ ಸ್ಥಿತಿ ಗಂಭೀರ

Spread the love ಕಾರವಾರ: ಗೋವಾಗೆ ತೆರಳಿ ಅಲ್ಲಿಂದ ವಾಪಸಾಗುತ್ತಿದ್ದ ಕಾರವಾರದ ಕ್ರಿಮ್ಸ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಿಗೆ ಎಮ್ಮೆಯೊಂದು ಅಡ್ಡಬಂದ ಪರಿಣಾಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ