Breaking News

ಬಿಜೆಪಿ ಹೈಕಮಾಂಡ್​ ಸೂಚನೆ ಬೆನ್ನಲ್ಲೇ ಸೈಲೆಂಟ್​ ಆದ ಶಾಸಕ ಯತ್ನಾಳ್​​: ಯಡಿಯೂರಪ್ಪ ಬಗ್ಗೆ ಮಾತನಾಡದಂತೆ ಸೂಚನೆ

Spread the love

ವಿಜಯಪುರ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ (Yediyurappa) ಬಗ್ಗೆ ಮಾತನಾಡಬೇಡಿ ಎಂದಿದ್ದಾರೆ. ನಮ್ಮ ಹೈಕಮಾಂಡ್ ಹೇಳಿದ ತಕ್ಷಣ ನಾನು ಸಾಫ್ಟ್ ಆಗಲೇಬೇಕಲ್ಲ. ಇನ್ಮುಂದೆ ಯಡಿಯೂರಪ್ಪ ಬಗ್ಗೆ‌ ನನಗೆ ಪ್ರಶ್ನೆ ಕೇಳಬೇಡಿ ಎಂದು ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಮನವಿ ಮಾಡಿದರು. ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಬಿಜೆಪಿ ಹೈಕಮಾಂಡ್​ ಸೂಚನೆ ಬೆನ್ನಲ್ಲೇ ಯತ್ನಾಳ್​ ಸೈಲೆಂಟ್ ಆಗಿದ್ದಾರೆ.​ ಯಡಿಯೂರಪ್ಪ ಬಗ್ಗೆ ನನಗೆ ಗೌರವವಿದೆ, ಅವರ ಬಗ್ಗೆ ಮಾತನಾಡಲ್ಲ. ಯಡಿಯೂರಪ್ಪ ಹಿರಿಯರಿದ್ದಾರೆ ಬೈಯ್ಯೋದು ಬೇಡ ಅಂದಿದ್ದಾರೆ. ಇನ್ಮುಂದೆ ಬಿಎಸ್​ವೈ ಬಗ್ಗೆ ಮಾತಾಡಬೇಡಿ ಎಂದು ಸೂಚಿಸಿದ್ದಾರೆ. ಕೇಂದ್ರದ ಬಿಜೆಪಿ ನಾಯಕರ ಸೂಚನೆಯಂತೆ ಮಾತನಾಡುವುದಿಲ್ಲ. ಮಾಜಿ ಸಿಎಂ ಯಡಿಯೂರಪ್ಪ ನಮ್ಮ ಆಸ್ತಿ ಕಸಿದುಕೊಂಡಿಲ್ಲ. ಅವರ ಬಗ್ಗೆ ನನಗೆ ಅಪಾರ ಗೌರವವಿದೆ ಎಂದು ಯತ್ನಾಳ್ ಹೇಳಿದರು.


Spread the love

About Laxminews 24x7

Check Also

ಕಾಂಗ್ರೆಸ್ ನಾಯಕತ್ವ ಬಿಕ್ಕಟ್ಟು ಕ್ಲೈಮ್ಯಾಕ್ಸ್‌ನತ್ತ : ಜಾರಕಿಹೊಳಿ

Spread the loveನವದೆಹಲಿ : ಸದ್ದಿಲ್ಲದೆ ದೆಹಲಿಗೆ ತೆರಳಿ ಎರಡು ದಿನ ಅಲ್ಲೇ ಬೀಡು ಬಿಟ್ಟು, ನಂತರ ಎಐಸಿಸಿ ಅಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ