Breaking News

ಯುವಕರು ಮಹಾನ್ ಭಾರತ ನಿರ್ಮಾಣದ ಸಂಕಲ್ಪ ಮಾಡಬೇಕು: ಅಮಿತ್ ಶಾ

Spread the love

ಹುಬ್ಬಳ್ಳಿ: ಯುವಕರು ವೈಯಕ್ತಿಕ ಅಭಿವೃದ್ಧಿ ಜತೆಗೆ ಮಹಾನ್ ಭಾರತ ನಿರ್ಮಾಣದ ಸಂಕಲ್ಪ ಮಾಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ನೀಡಿದರು.

ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಬಿವಿಬಿ ಇಂಜಿನಿಯರಿಂಗ್ ಕಾಲೇಜಿನ ಅಮೃತ ಮಹೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

 

ಭಾರತ ವಿಶ್ವದಲ್ಲಿ ಅಗ್ರಗಣ್ಯ ರಾಷ್ಟ್ರವಾಗಬೇಕೆಂಬುದು ಪ್ರಧಾನಿಯವರ ಆಶಯವಾಗಿದೆ. ಈ ನಿಟ್ಟಿನಲ್ಲಿ ತಾಂತ್ರಿಕ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾಗಿದೆ ಎಂದರು.

ಕಳೆದ ಎಂಟುವರೆ ವರ್ಷಗಳಿಂದ ದೇಶದಲ್ಲಿ ಅಭಿವೃದ್ಧಿ, ಬದಲಾವಣೆ ವೇಗ ತೀವ್ರತೆ ಪಡೆದುಕೊಂಡಿದೆ. 2014 ರ ಮೊದಲು ಭಾರತ ಆರ್ಥಕವಾಗಿ ವಿಶ್ವದಲ್ಲಿ 12 ನೇ ಸ್ಥಾನದಲ್ಲಿತ್ತು, ಇದೀಗ 5ನೇ ಸ್ಥಾನದಲ್ಲಿದ್ದು, ವಿಶ್ವದ 3ನೇ ಆರ್ಥಿಕ ಶಕ್ತಿ ರಾಷ್ಟ್ರವಾಗಿ ಹೊರಹೊಮ್ಮಲಿದೆ ಎಂದರು.

ಭಾರತ 5 ಟ್ರಿಲಿಯನ್ ಡಾಲರ್ ಆರ್ಥಿಕ ರಾಷ್ಟ್ರವಾಗಬೇಕೆಂಬುದು ಪ್ರಧಾನಿಯವರ ಕನಸಾಗಿದೆ. ಇದು ಸಾಧ್ಯವಾದರೆ ತಾಂತ್ರಿಕ ಪದವೀಧರರಿಗೆ ದೊಡ್ಡ ಅವಕಾಶಗಳು ಸೃಷ್ಟಿಯಾಗಲಿವೆ. ದೇಶದಲ್ಲಿ ಸುಮಾರು 70 ಸಾವಿರ ನವೋದ್ಯಮಗಳು ಆರಂಭವಾಗಿದ್ದು, ಇದರಲ್ಲಿ ಶೇ.30 ನವೋದ್ಯಮಗಳು ಯುವತಿಯರು, ಮಹಿಳೆಯರಿಂದ ಆರಂಭಗೊಂಡಿವೆ. ಹೆಚ್ಚಿನವು 2-3 ನೇ ಸ್ತರದ ನಗರಗಳಲ್ಲಿ ಆರಂಭವಾಗಿರುವುದು ಸಂತಸದ ಸಂಗತಿ ಎಂದರು.

ಭಾರತವನ್ನು ವಿಶ್ವದಲ್ಲೇ ಉತ್ಪಾದನಾ ಹಬ್ ಆಗಿಸಬೇಕು ಎಂದು ಪ್ರಧಾನಿಯವರು ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ. 2014 ಮುಂಚೆ ಬೌದ್ಧಿಕ ಆಸ್ತಿ ಹಕ್ಕು (ಪೇಟೆಂಟ್) ನೋಂದಣಿಗೆ ಅರ್ಜಿ ಸಲ್ಲಿಕೆಯಾಗುತ್ತಿದ್ದವು. ಇದೀಗ 1.5 ಲಕ್ಷ ಅರ್ಜಿಗಳು ಬರುತ್ತಿವೆ. ಮುದ್ರಾ ಯೋಜನೆಯಡಿ ಸುಮಾರು 4.30 ಕೋಟಿ ಫಲಾನುಭವಿಗಳಿಗೆ 2 ಲಕ್ಷ ಕೋಟಿ ರೂ.ನಷ್ಟು ಸಾಲ ನೀಡಲಾಗಿದೆ ಎಂದರು.


Spread the love

About Laxminews 24x7

Check Also

ವಿಶ್ವಪ್ರಸಿದ್ಧ ಮೈಸೂರು ದಸರಾ ಉದ್ಘಾಟನೆಯಲ್ಲಿ ಬಾನು ಮುಷ್ತಾಕ್‌ ಅವರಿಂದ ಶೋಭೆಯ ಸಂದೇಶ

Spread the love ವಿಶ್ವಪ್ರಸಿದ್ಧ ಮೈಸೂರು ದಸರಾ ಉದ್ಘಾಟನೆಯಲ್ಲಿ ಬಾನು ಮುಷ್ತಾಕ್‌ ಅವರಿಂದ ಶೋಭೆಯ ಸಂದೇಶ ಮೈಸೂರು: ಕನ್ನಡಕ್ಕೆ ಮೊದಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ