Breaking News

ಐವರು ಶತಾಯುಷಿಗಳಿಗೆ ಸನ್ಮಾನ

Spread the love

ಅಂಕಲಗಿ: ಹಿರಿಯರು ನಮ್ಮ ಇಂದಿನ ಬಹು ದೊಡ್ಡ ಆಸ್ತಿ. ಅವರ ನಡೆ, ನುಡಿ, ಆದರ್ಶಗಳು ನಮಗೆಲ್ಲ ಸ್ಫೂರ್ತಿ ಎಂದು ಸತೀಶ ಶುಗರ್ಸ್‌ನ ಉಪಾಧ್ಯಕ್ಷ ಎಲ್.ಆರ್.ಕಾರಗಿ ಹೇಳಿದರು.

ಸಮೀಪದ ಮಿಡಕನಟ್ಟಿ ಗ್ರಾಮದಲ್ಲಿ ಶುಕ್ರವಾರ ಶತಾಯುಷಿಗಳಿಗಾಗಿ ಹಮ್ಮಿಕೊಂಡ ಶತಮಾನೋತ್ಸವ ಸಮಾರಂಭದಲ್ಲಿ ಐವರು ಶತಾಯುಷಿಗಳನ್ನು ಕಾರಗಿ ಪರಿವಾರದ ಪರವಾಗಿ ಸನ್ಮಾನಿಸಿ ಮಾತನಾಡಿದರು.

 

ಶತಾಯುಷಿಗಳಾದ ರಾಮಸಿದ್ದಪ್ಪ ಹಾಲಪ್ಪ ಕಾರಗಿ (105), ಹಾಲಪ್ಪ ಸಿದ್ದಪ್ಪ ಸಂಸುದ್ದಿ (104), ಶಿವಲಿಂಗಪ್ಪ ಶಿದ್ಲಿಂಗಪ್ಪ ಪಾಟೀಲ (ನಬಾಪೂರ)-102), ಭೀಮಪ್ಪ ಹನುಮಂತಪ್ಪ ಹೊಸೂರ (103) ಸನ್ಮಾನ ಪಡೆದರು.

ಡಾ.ವಿನೋದ ಕಾರಗಿ, ಮಹಾಂತೇಶ ಕಾರಗಿ ಸೇರಿದಂತೆ ಗ್ರಾಮಸ್ಥರು, ಅಭಿಮಾನಿಗಳು ಇದ್ದರು. ನಿವೃತ್ತ ಮುಖ್ಯ ಶಿಕ್ಷಕ ಬಸವರಾಜ ಕಾರಗಿ ನಿರೂಪಿಸಿದರು. ಮಹಾಂತೇಶ ಕಾರಗಿ ವಂದಿಸಿದರು.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ