Breaking News

ಸರ್ವರ್‌ ಸಮಸ್ಯೆ: ನವೋದಯಕ್ಕೆ ಅರ್ಜಿ ಸಲ್ಲಿಸಲು ಪರದಾಟ

Spread the love

ಬೆಂಗಳೂರು: ರಾಜ್ಯದಲ್ಲಿನ ಜವಾಹರ್ ನವೋದಯ ವಿದ್ಯಾಲಯಗಳಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯಲು ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದ್ದು, ಸರ್ವರ್ ಸಮಸ್ಯೆಯಿಂದಾಗಿ ಅರ್ಜಿ ಸಲ್ಲಿಸಲು ಪೋಷಕರಿಗೆ ಸಾಧ್ಯವಾಗಿಲ್ಲ.

ಆನ್‌ಲೈನಲ್ಲಿ ಅರ್ಜಿ ಸಲ್ಲಿಸಲು ಇದೇ ಜನವರಿ 31 ಕೊನೆಯ ದಿನ.

ಪ್ರತಿ ದಿನವೂ ಸರ್ವರ್‌ ಸಮಸ್ಯೆ ಇದೆ. ನಿತ್ಯವೂ ಸೈಬರ್‌ ಕೇಂದ್ರಕ್ಕೆ ಹೋಗಿ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಮರಳುತ್ತಿದ್ದೇವೆ. ಸರ್ವರ್ ಸಮಸ್ಯೆ ಬಗೆಹರಿಸಬೇಕು. ಇಲ್ಲವೇ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಿಸಬೇಕು ಎಂದು ಗದಗ ಜಿಲ್ಲೆಯ ರಾಮಚಂದ್ರ ಒತ್ತಾಯಿಸಿದ್ದಾರೆ.

ಪ್ರತಿ ಜಿಲ್ಲೆಯ ನವೋದಯ ಶಾಲೆಯಲ್ಲೂ ಆ ಜಿಲ್ಲೆಯ ವಿದ್ಯಾರ್ಥಿಗಳಿಗಷ್ಟೆ ಪ್ರವೇಶ ನೀಡಲಾಗುತ್ತದೆ. 2022-23ನೇ ಸಾಲಿನಲ್ಲಿ 5ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಆಯ್ಕೆ ಪರೀಕ್ಷೆಗಳು ಏ.29ರಂದು ನಡೆಯಲಿವೆ.


Spread the love

About Laxminews 24x7

Check Also

ಸಕ್ಕರೆ ಕಾರ್ಖಾನೆಯ ಕ್ರಷರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕನೊಬ್ಬ ಸಾವ

Spread the love ಬೆಳಗಾವಿ: ಸಕ್ಕರೆ ಕಾರ್ಖಾನೆಯ ಕ್ರಷರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಹುಕ್ಕೇರಿ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ