Breaking News

ಸರ್ಕಾರಿ ಗೌರವದೊಂದಿಗೆ ಸಾರಥಿ ಅಂತ್ಯಕ್ರಿಯೆ

Spread the love

ಬೆಳಗಾವಿ: ಮಧ್ಯಪ್ರದೇಶದ ಗ್ವಾಲಿಯರ್ ಸಮೀಪ ಯುದ್ಧ ವಿಮಾನಗಳ ಮಧ್ಯೆ ಶನಿವಾರ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಪೈಲಟ್, ವಿಂಗ್ ಕಮಾಂಡರ್ ಹನುಮಂತರಾವ್ ಸಾರಥಿ ಅವರ ಅಂತ್ಯಕ್ರಿಯೆ ತಾಲ್ಲೂಕಿನ ಬೆನಕನ ಹಳ್ಳಿಯ ರುದ್ರಭೂಮಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಭಾನುವಾರ ನೆರವೇರಿತು.

 

ಕುರುಬ ಸಮುದಾಯದ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿತು. ಹಿರಿಯ ಸಹೋದರ ಪ್ರವೀಣ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಲಾಯಿತು. ಗಣೇಶಪುರದ ಮುಖ್ಯ ರಸ್ತೆಯಲ್ಲಿ ಪಾರ್ಥಿವ ಶರೀರದ ಮೆರವಣಿಗೆ ಮಾಡಲಾಯಿತು.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ