Breaking News

ಸಿದ್ದರಾಮಯ್ಯ ಈ ಬಾರಿ ಎಲ್ಲೇ ಸ್ಪರ್ಧಿಸಿದರೂ ಸೋಲುವುದು ಮಾತ್ರ ಖಚಿತ: .ಶ್ರೀರಾಮುಲು

Spread the love

ಮಾಜಿ ಸಿಎಂ ಸಿದ್ದರಾಮಯ್ಯ ಈ ಬಾರಿ ಎಲ್ಲೇ ಸ್ಪರ್ಧಿಸಿದರೂ ಸೋಲುವುದು ಮಾತ್ರ ಖಚಿತ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯನವರು ಮೊದಲು ಬಾದಾಮಿಯಿಂದ ಸ್ಪರ್ಧಿಸುತ್ತಾರೆ ಎನ್ನಲಾಗಿತ್ತು.

ಈಗ ಕೋಲಾರ, ವರುಣಾದಿಂದ ಸ್ಪರ್ಧೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಇನ್ನೂ ಅವರಿಗೆ ಕ್ಷೇತ್ರ ಯಾವುದು ಎಂಬುದೇ ಸ್ಥಿರವಾಗಿಲ್ಲ. ಈ ಬಾರಿ ಅವರು ಎಲ್ಲೇ ಸ್ಪರ್ಧಿಸಿದರೂ ಸೋಲುವುದು ನಿಶ್ಚಿತ ಎಂದರು.

ಅಧಿಕಾರಕ್ಕಾಗಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಯಾತ್ರೆ ಮಾಡುತ್ತಿವೆ. ಆದರೆ ಇವೆರಡೂ ಪಕ್ಷಗಳು ಅ ಧಿಕಾರಕ್ಕೆ ಬರಲ್ಲ. ಎರಡೂ ಪಕ್ಷಗಳು, ಸುಳ್ಳು ಮತ್ತು ಜೊಳ್ಳು ಯಾತ್ರೆಗಳನ್ನು ಮಾಡುತ್ತ ಜನರಿಗೆ ಮಂಕು ಬೂದಿ ಎರಚುತ್ತಿವೆ. ಈ ಯಾತ್ರೆಗಳಲ್ಲಿ ಹೇಳುತ್ತಿರುವುದು ಸುಳ್ಳು ಎಂಬುದು ಜನರಿಗೂ ಗೊತ್ತಿದೆ ಎಂದರು.


Spread the love

About Laxminews 24x7

Check Also

ಬ್ಯಾಂಕ್ ಮ್ಯಾನೇಜರ್ ಸಮಯಪ್ರಜ್ಞೆ: ಡಿಜಿಟಲ್ ಅರೆಸ್ಟ್​​ನಿಂದ 84 ಲಕ್ಷ ರೂ. ವಂಚನೆಗೆ ಬ್ರೇಕ್

Spread the loveಮಂಗಳೂರು: ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಅರೆಸ್ಟ್ ಎಂದು ಖದೀಮರು ಅಮಾಯಕರನ್ನು ವಂಚಿಸಿ ಕೋಟಿಗಟ್ಟಲೆ ಹಣ ವಂಚಿಸುತ್ತಿರುವುದು ಬೆಳಕಿಗೆ ಬರುತ್ತಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ