Breaking News

ಫೆ. 17ರಂದು ಸಿಎಂ ಬೊಮ್ಮಾಯಿ ಬಚಾವೋ ಬಜೆಟ್‌: ಪ್ರಿಯಾಂಕ್‌ ಖರ್ಗೆ ವ್ಯಂಗ್ಯ

Spread the love

ಲಬುರಗಿ: ರಾಜ್ಯದಲ್ಲಿ ಫೆ.17ರಂದು ಮಂಡನೆಯಾಗಲಿರುವುದು ಜನಸಾಮಾನ್ಯರ ಬದುಕು ಭದ್ರ ಮಾಡುವ ಬಜೆಟ್‌ ಅಲ್ಲ. ಅದು ಬಸವರಾಜ ಬೊಮ್ಮಾಯಿ ಬಚಾವೋ ಬಜೆಟ್‌ ಆಗಿರಲಿದೆ ಎಂದು ಮಾಜಿ ಸಚಿವ ಹಾಗೂ ಚಿತ್ತಾಪುರ ಶಾಸಕ ಪ್ರಿಯಾಂಕ್‌ ಖರ್ಗೆ ವ್ಯಂಗ್ಯವಾಡಿದರು.

 

ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈಗಾಗಲೇ ಕೇಂದ್ರ ಸರಕಾರದ ಬಜೆಟ್‌ ಮಾದರಿ ನೋಡಲಾಗಿದೆ. ಅದೊಂದು ಕೇವಲ ಮೋಡಿ ಮಾಡುವ ಮೋದಿ ರಂಜಿತ ಬಜೆಟ್‌ ಆಗಿದೆ. ಜನ ಸಾಮಾನ್ಯರಿಗೆ, ರೈತಾಪಿ ವರ್ಗಕ್ಕೆ ಯಾವುದೇ ಸೌಕರ್ಯಗಳನ್ನು ಕೊಡುವಲ್ಲಿ ಯಶ ಕಂಡಿಲ್ಲ. ಇದೊಂದು ದೂರದ ಗುಡ್ಡ ನುಣ್ಣಗೆ ಎಂಬಂತೆ ಕಂಡಂತಹ ಬಜೆಟ್‌ ಆಗಿದೆ ಎಂದರು.

ಶಾ-ಮೋದಿ ಆಟ ನಡೆಯಲ್ಲ
ರಾಜ್ಯಕ್ಕೆ ಪ್ರಧಾನಿ ಮೋದಿ ಮತ್ತು ಅಮಿತ್‌ ಶಾ ಯಾರೇ ಬರಲಿ ಅವರ ಆಟ ನಡೆಯುವುದಿಲ್ಲ ಎಂದ ಅವರು, ವಿಜಯ ಸಂಕಲ್ಪ ಯಾತ್ರೆ ಕೇವಲ ಸಂಕಲ್ಪವಾಗಿಯೇ ಉಳಿಯುತ್ತದೆ. ಅದು ನಿಜವಾಗದು. ನಿಮ್ಮ ಕನಸು ನನಸಾಗದು. ಡಬಲ್‌ ಎಂಜಿನ್‌ ಸರಕಾರ ಮಾಡುವ ಮಹಾ ಮೋಸದ ಬಗ್ಗೆ ಕನ್ನಡಿಗರು ಎಚ್ಚೆತ್ತುಕೊಂಡಿದ್ದಾರೆ ಎಂದರು. ಮುಂಬರುವ ದಿನಗಳಲ್ಲಿ ಈ ಬಂಡಲ್‌ ಜನತಾ ಸರಕಾರಕ್ಕೆ ತಕ್ಕ ಉತ್ತರ ಕೊಟ್ಟು ಮನೆಗೆ ಕಳುಹಿಸುವ ಅಭಿಯಾನವನ್ನು ಜನ ಆರಂಭಿಸಿದ್ದಾರೆ. ಜನ ಬೇಸತ್ತಿದ್ದಾರೆ. ಶೇ.40 ಕಮಿಷನ್‌, ಸುಳ್ಳು ಭರವಸೆ, ಆಡಳಿತ ವೈಫಲ್ಯದಿಂದ ಜನ ರೋಸಿ ಹೋಗಿದ್ದಾರೆ ಎಂದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ