Breaking News

ಆಪ್‌ ಕೌನ್ಸಿಲರ್‌ಗಳನ್ನು ಬುಟ್ಟಿಗೆ ಹಾಕಿಕೊಳ್ಳಲು ಬಿಜೆಪಿಗೆ ಸಾಧ್ಯವಿಲ್ಲ :ಕೇಜ್ರಿವಾಲ್‌

Spread the love

ವದೆಹಲಿ: 2022 ರ ಡಿ.4ರಂದು ನಡೆದಿದ್ದ ದೆಹಲಿ ಪಾಲಿಕೆ ಚುನಾವಣೆಯ 250 ಸ್ಥಾನಗಳಲ್ಲಿ 134 ಸ್ಥಾನಗಳನ್ನು ಗೆಲ್ಲುವ ಮೂಲಕ ಆಮ್‌ ಆದ್ಮಿ ಪಾರ್ಟಿ ಬಿಜೆಪಿ ಪಾಳಯವನ್ನು ನಡುಗಿಸಿತ್ತು. ಆದರೆ ಇದೀಗ ಈ ಕಿಚ್ಚು ಮೇಯರ್‌ ಚುನಾವಣೆಗೂ ತಟ್ಟಿದೆ.

 

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಮತ್ತು ದೆಹಲಿ ಲೆಫ್ಟಿನಂಟ್‌ ಗವರ್ನರ್‌ ವಿ.ಕೆ ಸಕ್ಸೇನಾ ನಡುವಿನ ಭಾರೀ ಕೆಸರೆರಚಾಟದಿಂದಾಗಿ ಎರಡು ಬಾರಿ ಮುಂದೂಡಲ್ಪಟ್ಟಿದ್ದ ದೆಹಲಿ ಪಾಲಿಕೆ ಮೇಯರ್‌ ಚುನಾವಣೆ ಫೆ.6 ಕ್ಕೆ ನಡೆಯಲಿದೆ. ಈ ಮಧ್ಯೆ ಬಿಜೆಪಿ- ಆಪ್‌ ನಾಯಕರ ವಾಕ್ಸಮರ ಜೋರಾಗಿದ್ದು ಈಗ ಸ್ವತಃ ಕೇಜ್ರೀವಾಲ್‌ ಅವರೇ ರಣಾಂಗಣಕ್ಕೆ ಇಳಿದಿದ್ಧಾರೆ. ಹೊಸ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಕೇಜ್ರೀವಾಲ್‌ ಅವರು ಆಪ್‌ ಕೌನ್ಸಿಲರ್‌ಗಳನ್ನು ಬುಟ್ಟಿಗೆ ಹಾಕಿಕೊಳ್ಳಲು ಬಿಜೆಪಿಗೆ ಸಾಧ್ಯವಿಲ್ಲ ಅನ್ನುವ ಮೂಲಕ ಬಿಜೆಪಿಗೆ ನೇರ ವಾಗ್ದಾಳಿ ನಡೆಸಿದ್ದಾರೆ.ಬಿಜೆಪಿ ಗದ್ದಲವೆಬ್ಬಿಸುವ ಮೂಲಕ ಮೇಯರ್‌ ಚುನಾವಣೆ ಮಾಡಲು ಬಿಟ್ಟಿರಲಿಲ್ಲ ಎಂದು ದೆಹಲಿ ಸಿಎಂ ಕಿಡಿಕಾರಿದ್ದಾರೆ.

ನಾವು ಚುನಾವಣೆಯನ್ನು ಮಾಡಬೇಕಾಗಿದೆ. ಆದರೆ ಬಿಜೆಪಿ ನಾಯಕರು ಗದ್ದಲಗಳನ್ನು ಮಾಡುವುದರೊಂದಿಗೆ ಚುನಾವಣೆಗೆ ಅಡ್ಡಿಪಡಿಸಿದ್ರು. ಈಗ ಬಿಜೆಪಿ ಬೇರೆ ದಾರಿಯಿಲ್ಲದೆ ಅವರ ಸೋಲನ್ನು ಒಪ್ಪಬೇಕಾಗಿದೆ ಅಂತ ಕೇಜ್ರಿವಾಲ್‌ ಹೇಳಿದ್ದಾರೆ.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ