Breaking News

ಬಿಜೆಪಿ ಸರ್ಕಾರ ಹೆಸರು ಬದಲಾವಣೆ ಬಿಟ್ಟರೆ ಏನೂ ಮಾಡಿಲ್ಲ.

Spread the love

ಬೀದರ್: ‘ಬಿಜೆಪಿ ಸರ್ಕಾರ ಹೆಸರು ಬದಲಾವಣೆ ಬಿಟ್ಟರೆ ಏನೂ ಮಾಡಿಲ್ಲ.

ಬಿಜೆಪಿಗೆ ಲೂಟಿ ಹೊಡೆಯುವುದು ಬಿಟ್ಟರೆ ಬೇರೆ ಕೆಲಸವಿಲ್ಲ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

‘ಬಿಜೆಪಿ ಸರ್ಕಾರ ಜನರ ರಕ್ತ ಹೀರಲು ಶುರು ಮಾಡಿದೆ. ಕಮಿಷನ್‌ ಕೊಡಲು ಸಾಧ್ಯವಾಗದೇ ಬೆಳಗಾವಿ, ಬೆಂಗಳೂರು, ತಮಕೂರಿನ ಗುತ್ತಿಗೆದಾರರು ಮೃತಪಟ್ಟರು. ಒಬ್ಬರು ದಯಾ ಮರಣ ಕೋರಿದರು. ಗುತ್ತಿಗೆದಾರರ ಸಂಘದವರು ನೇರವಾಗಿ ಪ್ರಧಾನಮಂತ್ರಿಗೆ ಪತ್ರ ಬರೆದರು. ಲಂಚ ಕೊಡದೆ ಯಾವ ಕೆಲಸವೂ ಆಗುತ್ತಿಲ್ಲ’ ಎಂದು ನಗರದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದರು.

ಲೋಕೋಪಯೋಗಿ, ಬಿಬಿಎಂಪಿ ಸೇರಿದಂತೆ ಸರ್ಕಾರದ ಎಲ್ಲ ಕಚೇರಿಗಳಲ್ಲೂ ಲಂಚದ ವ್ಯವಹಾರ ನಡೆಯುತ್ತಿದೆ. ವರ್ಗಾವಣೆ, ಬಡತಿ, ನೇಮಕಾತಿಗೂ ಲಂಚ ಕೇಳುತ್ತಿದ್ದಾರೆ. ಪೊಲೀಸ್‌ ಅಧಿಕಾರಿಯೇ ಜೈಲಿಗೆ ಹೋಗಿರುವುದು ಎಲ್ಲರಿಗೂ ತಿಳಿಸಿದೆ. ಬಿಜೆಪಿ ಸರ್ಕಾರ, ಅಲಿಬಾಬಾ ಹಾಗೂ 40 ಜನರ ಕಳ್ಳರ ಕೂಟದಂತೆ ಆಗಿದೆ’ ಎಂದು ಟೀಕಿಸಿದರು.


Spread the love

About Laxminews 24x7

Check Also

ಸರ್ಕಾರಿ ವೈದ್ಯರು, ನರ್ಸ್​ಗಳಿಗೆ ಗ್ರಾಮೀಣ ಸೇವೆ ಕಡ್ಡಾಯ

Spread the loveಬೆಂಗಳೂರು: ನಗರ ಪ್ರದೇಶಗಳಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ವೈದ್ಯರು, ನರ್ಸ್​ಗಳು ಸೇರಿದಂತೆ ಇತರ ಸಿಬ್ಬಂದಿ ಇನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ