Breaking News
Home / ಜಿಲ್ಲೆ / ಬಿಜಾಪುರ / ಪ್ರಮೋದ್ ಮುತಾಲಿಕ್ ಗೆ ಸಿಎಂ ಟಾಂಗ್

ಪ್ರಮೋದ್ ಮುತಾಲಿಕ್ ಗೆ ಸಿಎಂ ಟಾಂಗ್

Spread the love

ವಿಜಯಪುರ; ; ರಾಜ್ಯದ ಇತಿಹಾಸದಲ್ಲಿ 5 ವರ್ಷಗಳಲ್ಲಿ ಮುಖ್ಯಮಂತ್ರಿಯಾಗಿ ಅತಿ ಹೆಚ್ಚು ಸಾಲ ಮಾಡಿರುವ ಖ್ಯಾತಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರದ್ದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ವಿಜಯಪುರದ ಸೈನಿಕ್ ಸ್ಕೂಲ್ ಹೆಲಿಪ್ಯಾಡ್‍ಗೆ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಕಳೆದ ಬಜೆಟ್ ಘೋಷಣೆ ಗಳ ಪೈಕಿ ಕೇವಲ 10 ರಷ್ಟು ಕಾಮಗಾರಿಗಳು ಜಾರಿಯಾಗಿವೆ 3 ಲಕ್ಷ ಕೋಟಿ ಸಾಲ ಇದೆ ಎಂದಿರು. ಬಜೆಟ್ ನಲ್ಲಿ ಎಷ್ಟು ಅನುಷ್ಠಾನ ಗೊಂಡಿದೆ ಎಂದು ವಿಧಾನಸಭೆಯಲ್ಲಿ ವರದಿ ನೀಡುತ್ತೇವೆ ಎಂದರು.

ಆಂತರಿಕ ವಿಚಾರ
ಕಾಂಗ್ರೆಸ್ ಅವರ ಪ್ರಾಣಾಳಿಕೆ ಬಗ್ಗೆ ಪರಮೇಶ್ವರ್ ಅವರು ಅಸಮಾಧಾನ ಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅದು ಅವರ ಆಂತರಿಕ ವಿಚಾರ ಎಂದರು. ಪರಮೇಶ್ವರ್ ಅವರು ಬಹಳ ಬುದ್ದಿವಂತರು. ಎಲ್ಲವನ್ನೂ ಅರಿತವರು. ಅಸಮಾಧಾನ ವ್ಯಕ್ತಪಡಿಸಿದ್ದಾರೆ ಅರ್ಥಮಾಡಿಕೊಳ್ಳಬೇಕು ಎಂದರು.

ಕಾಂಗ್ರೆಸ್ ಪಕ್ಷದ ಶಾಸಕರನ್ನು ಭದ್ರ ಮಾಡಿಕೊಳ್ಳಲಿ
ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪರ ಅಲೆ ಇದೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಸಿದ್ದರಾಮಯ್ಯ ಅವರು ಪ್ರವಾಸ ಮಾಡುತ್ತಿರುವ ಭಾಗದ ಶಾಸಕರನ್ನು ಗಟ್ಟಿಯಾಗಿ ಹಿಡಿದುಕೊಳ್ಳಲಿ. ಕಾಂಗ್ರೆಸ್ ಪಕ್ಷದ ಶಾಸಕರನ್ನು ಭದ್ರ ಮಾಡಿಕೊಳ್ಳಲಿ. ಜವಾಬ್ದಾರಿಯುತ ಸ್ಥಾನ ದಲ್ಲಿರುವ ನಾನು ಇಷ್ಟೇ ಸಲಹೆ ನೀಡಲು ಸಾಧ್ಯ ಎಂದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ