Breaking News

ನಿಪ್ಪಾಣಿ: ‘ಹೆಚ್ಚು ಅಂಕ ಗಳಿಕೆಗೆ ಒತ್ತಡ ಹೇರದಿರಿ’

Spread the love

ನಿಪ್ಪಾಣಿ: ‘ಮಕ್ಕಳು ಶಾರೀರಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗಿರಬೇಕು. ಆಗ ದೇಶ-ವಿದೇಶಗಳಲ್ಲಿ ಗುರುತಿಸಿಕೊಳ್ಳುವಂತಹ ಕಾರ್ಯ ಮಾಡಲು ಸಶಕ್ತರಾಗುವರು’ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

 

ಸ್ಥಳೀಯ ಶಿವಶಂಕರ ಜೊಲ್ಲೆ ಪಬ್ಲಿಕ್ (ಸಿಬಿಎಸ್‍ಇ) ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಮಕ್ಕಳಿಗೆ ಅತಿ ಹೆಚ್ಚು ಅಂಕ ಪಡೆಯುವಂತೆ ಒತ್ತಡ ಹೇರಬಾರದು. ಮಕ್ಕಳಿಗೆ ನಿತ್ಯ ಯೋಗ, ಪ್ರಾಣಾಯಮ ಮಾಡುವಂತೆ ಹೇಳಬೇಕು ಹಾಗೂ ಅವರು ಮಾಡಬೇಕು’ ಎಂದರು.

ಸಾನ್ನಿಧ್ಯ ವಹಿಸಿದ್ದ ಸ್ಥಳೀಯ ಸಮಾಧಿ ಮಠದ ಪ್ರಾಣಲಿಂಗ ಸ್ವಾಮೀಜಿ ಆಶೀರ್ವಚನ ನೀಡಿದರು. ಸ್ಥಳೀಯ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯ ಚೇರ್ಮನ್ ಸಹಕಾರ ರತ್ನ ಚಂದ್ರಕಾಂತ ಕೋಠಿವಾಲೆ ಮಾತನಾಡಿದರು. ಪ್ರಾಚಾರ್ಯೆ ಊರ್ಮಿಲಾ ಚೌಗುಲೆ ವಾರ್ಷಿಕ ವರದಿ ವಾಚಿಸಿದರು. ವಿದ್ಯಾರ್ಥಿಗಳು, ಮಕ್ಕಳು ಆಕರ್ಷಕವಾಗಿ ನೃತ್ಯ ಮಾಡಿದರು.


Spread the love

About Laxminews 24x7

Check Also

ರೂ. 40 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ “ಅಕ್ಕ ಕೆಫೆ” ಕ್ಯಾಂಟಿನ್‌ನ ನಿರ್ಮಾಣ ಕಾಮಗಾರಿಯ ಉದ್ಘಾಟನೆ

Spread the love  ಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಬೆಳಗಾವಿ ಸಮೀಪದ ರಾಣಿ ಚೆನ್ನಮ್ಮ ಮೃಗಾಲಯದಲ್ಲಿ, ಮಹಿಳಾ ಸ್ವಾವಲಂಬಿ ಯೋಜನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ