Breaking News

ಲಾಕ್‍ಡೌನ್ ಎಫೆಕ್ಟ್ – ಸೈಕಲ್ ಹತ್ತಿ ಉತ್ತರಪ್ರದೇಶಕ್ಕೆ ಹೊರಟ ನಾಲ್ವರು ಯುವಕರು

Spread the love

ಹಾಸನ: ಕೊರೊನಾ ವೈರಸ್ ಹಾವಳಿಯಿಂದ ದೇಶಾದ್ಯಂತ ಜಾರಿಯಲ್ಲಿರುವ ಲಾಕ್‍ಡೌನ್‍ನಿಂದಾಗಿ ತಮ್ಮ ರಾಜ್ಯಕ್ಕೆ ತೆರಳಲು ಸಾಧ್ಯವಾಗದೆ ನಾಲ್ವರು ಯುವಕರು ಹಾಸನದಲ್ಲೇ ಉಳಿದಿದ್ದರು. ಆದರೆ ಈಗ ಹೊಸದಾಗಿ ಸೈಕಲ್ ಖರೀದಿಸಿ ತಮ್ಮ ರಾಜ್ಯದತ್ತ ಪ್ರಯಾಣ ಬೆಳೆಸಿದ್ದಾರೆ.

ಉತ್ತರಪ್ರದೇಶದಿಂದ ಹಾಸನಕ್ಕೆ ಕೂಲಿ ಕೆಲಸಕ್ಕೆ ಬಂದಿದ್ದ ಕಾರ್ಮಿಕರು ಲಾಕ್‍ಡೌನ್ ನಂತರ ವಾಪಸ್ ತಮ್ಮ ರಾಜ್ಯಕ್ಕೆ ತೆರಳಲಾಗದೇ ಇಲ್ಲಿಯೇ ಉಳಿದುಕೊಂಡಿದ್ದರು. ಇದೀಗ ಲಾಕ್‍ಡೌನ್ ಸಡಿಲಿಕೆ ಮಾಡಿದ್ದರು ಕೂಡ ವಾಪಸ್ ತೆರಳಲು ಬಸ್ ಇಲ್ಲದಂತಾಗಿದೆ.

ಇತ್ತ ಸ್ವಂತ ವಾಹನ ಮಾಡಿಕೊಂಡು ಉತ್ತರಪ್ರದೇಶಕ್ಕೆ ಹೋಗಲು ಯುವಕರ ಬಳಿ ಹಣವಿಲ್ಲ. ಹೀಗಾಗಿ ಹಾಸನ ನಗರದಲ್ಲಿರುವ ಸಿಟಿ ಸೈಕಲ್ ಶಾಪ್‍ಗೆ ತೆರಳಿದ ಯುವಕರು ಹೊಸದಾಗಿ ನಾಲ್ಕು ಸೈಕಲ್ ಖರೀದಿಸಿ ತಮ್ಮ ರಾಜ್ಯದತ್ತ ಪ್ರಯಾಣ ಬೆಳೆಸಿದ್ದಾರೆ.


Spread the love

About Laxminews 24x7

Check Also

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ

Spread the loveಹಾಸನ (ಮಾ.19): ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠರಾದ ಎಚ್.ಡಿ. ದೇವೇಗೌಡರ ಕುಟುಂಬದಲ್ಲಿ ದುಃಖದ ಛಾಯೆ ಆವರಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ