Breaking News

ಬಿಜೆಪಿಯವರು ಮತಗಳನ್ನೇ ಕದಿಯುತ್ತಾರೆ: ಡಿಕೆಶಿ

Spread the love

ಮಾಲೂರು (ಕೋಲಾರ): ‘ಚಿನ್ನ, ಚಪ್ಪಲಿ ಕದಿಯೋದನ್ನು ನಾವೆಲ್ಲಾ ನೋಡಿದ್ದೇವೆ. ಆದರೆ, ಬಿಜೆಪಿಯವರು ಮತಗಳನ್ನೇ ಕದಿಯುತ್ತಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ಕಚೇರಿ ಆವರಣದಲ್ಲಿ ಶನಿವಾರ ಪ್ರಜಾಧ್ವನಿ ಯಾತ್ರೆ ಮತ್ತು ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.

 

‘ಅಡುಗೆ ಅನಿಲದ ಬೆಲೆ ಹತ್ತು ಪೈಸೆ ಹೆಚ್ಚಾದಾಗ ಯಡಿಯೂರಪ್ಪ ಹಾಗೂ ಶೋಭಾ ಕರಂದ್ಲಾಜೆ ಅವರು ತಲೆ ಮೇಲೆ ಸಿಲಿಂಡರ್‌, ಸ್ಟೌ ಇಟ್ಟುಕೊಂಡು ಓಡಾಡಿದ್ರು. ಗುಜರಾತ್‌ ಮುಖ್ಯಮಂತ್ರಿಯಾಗಿದ್ದ ಮೋದಿ, ‘ಮತ ಹಾಕುವಾಗ ಗ್ಯಾಸ್ ಸಿಲಿಂಡರ್‌ ಬೆಲೆ ಜ್ಞಾಪಕ ಮಾಡಿಕೊಂಡು ಮತ ಹಾಕಿ’ ಎಂದು ಹೇಳಿದ್ದರು. ಈಗ ಗ್ಯಾಸ್‌ ಸಿಲಿಂಡರ್‌, ಹಾಲು, ಬೇಳೆ, ಎಣ್ಣೆ ಬೆಲೆ ಹೆಚ್ಚಾಗಿದೆ. ಅವರೆಲ್ಲ ಏಕೆ ಸುಮ್ಮನಿದ್ದಾರೆ’ ಎಂದು ಪ್ರಶ್ನಿಸಿದರು.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ