Breaking News

ಬಿಜೆಪಿಯವರು ಮತಗಳನ್ನೇ ಕದಿಯುತ್ತಾರೆ: ಡಿಕೆಶಿ

Spread the love

ಮಾಲೂರು (ಕೋಲಾರ): ‘ಚಿನ್ನ, ಚಪ್ಪಲಿ ಕದಿಯೋದನ್ನು ನಾವೆಲ್ಲಾ ನೋಡಿದ್ದೇವೆ. ಆದರೆ, ಬಿಜೆಪಿಯವರು ಮತಗಳನ್ನೇ ಕದಿಯುತ್ತಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ಕಚೇರಿ ಆವರಣದಲ್ಲಿ ಶನಿವಾರ ಪ್ರಜಾಧ್ವನಿ ಯಾತ್ರೆ ಮತ್ತು ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.

 

‘ಅಡುಗೆ ಅನಿಲದ ಬೆಲೆ ಹತ್ತು ಪೈಸೆ ಹೆಚ್ಚಾದಾಗ ಯಡಿಯೂರಪ್ಪ ಹಾಗೂ ಶೋಭಾ ಕರಂದ್ಲಾಜೆ ಅವರು ತಲೆ ಮೇಲೆ ಸಿಲಿಂಡರ್‌, ಸ್ಟೌ ಇಟ್ಟುಕೊಂಡು ಓಡಾಡಿದ್ರು. ಗುಜರಾತ್‌ ಮುಖ್ಯಮಂತ್ರಿಯಾಗಿದ್ದ ಮೋದಿ, ‘ಮತ ಹಾಕುವಾಗ ಗ್ಯಾಸ್ ಸಿಲಿಂಡರ್‌ ಬೆಲೆ ಜ್ಞಾಪಕ ಮಾಡಿಕೊಂಡು ಮತ ಹಾಕಿ’ ಎಂದು ಹೇಳಿದ್ದರು. ಈಗ ಗ್ಯಾಸ್‌ ಸಿಲಿಂಡರ್‌, ಹಾಲು, ಬೇಳೆ, ಎಣ್ಣೆ ಬೆಲೆ ಹೆಚ್ಚಾಗಿದೆ. ಅವರೆಲ್ಲ ಏಕೆ ಸುಮ್ಮನಿದ್ದಾರೆ’ ಎಂದು ಪ್ರಶ್ನಿಸಿದರು.


Spread the love

About Laxminews 24x7

Check Also

ಬಂಡೀಪುರ ಸಫಾರಿ ಪುನಾರಂಭಕ್ಕೆ ರೈತ ಸಂಘದ ವಿರೋಧ: ಗುಂಡ್ಲುಪೇಟೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

Spread the love​ಗುಂಡ್ಲುಪೇಟೆ: ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ಪುನಾರಂಭಿಸಲು ಉದ್ದೇಶಿಸಿರುವ ಸರ್ಕಾರದ ನಿರ್ಧಾರದ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ