Breaking News
Home / ರಾಜಕೀಯ / 8-10 ಬಿಜೆಪಿ ಸಂಸದರು ಚುನಾವಣೆಗೆ ಸ್ಪರ್ಧಿಸಲ್ಲ: ಡಿಕೆಶಿ

8-10 ಬಿಜೆಪಿ ಸಂಸದರು ಚುನಾವಣೆಗೆ ಸ್ಪರ್ಧಿಸಲ್ಲ: ಡಿಕೆಶಿ

Spread the love

ನಕಪುರ: ಸರ್ಕಾರದಲ್ಲಿ ರಾಜ್ಯದ ಪರವಾಗಿ ಧ್ವನಿ ಎತ್ತಲು ಸಾಧ್ಯವಾಗದ ಬಿಜೆಪಿಯ ಸಂಸದರು ಒಳಗೊಳಗೆ ಭಾರಿ ಅವಮಾನ ಎದುರಿಸುತ್ತಿದ್ದಾರೆ. ಹಾಗಾಗಿ ಈ ಬಾರಿ ಎಂಟರಿಂದ ಹತ್ತು ಬಿಜೆಪಿ ಸಂಸದರು ಲೋಕಸಭಾ ಚುನಾವಣೆಗೆ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

 

‘ಈ ಸರ್ಕಾರದಲ್ಲಿ ಮಾತನಾಡಲು ನಮಗೆ ಧ್ವನಿ ಇಲ್ಲ ಎಂದು ಬಿಜೆಪಿ ಸಂಸದರು ನನ್ನ ಬಳಿ ನೋವು ತೋಡಿಕೊಂಡಿದ್ದಾರೆ. ಸದ್ಯಕ್ಕೆ ಅವರ ಹೆಸರು ಬೇಡ. ಆ ಸಂಸದರ ಯಾರು ಎಂಬ ಮಾಹಿತಿಯನ್ನು ಮುಂದೊಂದು ದಿನ ಬಹಿರಂಗ ಪಡಿಸುತ್ತೇನೆ’ ಎಂದರು.

ಡಬಲ್‌ ಇಂಜಿನ್‌ ಸರ್ಕಾರದಲ್ಲಿ ಮೇಕೆದಾಟು ಜಲಾಶಯ ನಿರ್ಮಾಣಕ್ಕೆ ಒಪ್ಪಿಗೆ ಪಡೆಯಲು ರಾಜ್ಯದ ಬಿಜೆಪಿ ಸಂಸದರಿಂದ ಸಾಧ್ಯವಾಗಿಲ್ಲ. ಹಾಗಾಗಿ ಅವರು ಚುನಾವಣೆಯಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ ಎಂದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ