Breaking News

ಹೊಂದಾಣಿಕೆ, ಕೋಟಾಕ್ಕೆ ಕಾಂಗ್ರೆಸ್‌ ತಿಲಾಂಜಲಿ

Spread the love

ಬೆಂಗಳೂರು: ಈ ಬಾರಿ ಚುನಾವಣೆಗೆ ಟಿಕೆಟ್‌ ಹಂಚಿಕೆ ಸಂದರ್ಭದಲ್ಲಿ ಹೊಂದಾಣಿಕೆಯ ರಾಜಕೀಯ ಹಾಗೂ ಕೋಟಾ ವ್ಯವಸ್ಥೆಗೆ ತಿಲಾಂಜಲಿ ನೀಡಲು ಕಾಂಗ್ರೆಸ್‌ ಹೈಕಮಾಂಡ್‌ ತೀರ್ಮಾನಿಸಿದೆ.

ಕಳೆದ ಚುನಾವಣೆಯಲ್ಲಿ ಇದರಿಂದಾಗಿಯೇ ಕೆಲವು ಕ್ಷೇತ್ರಗಳಲ್ಲಿ ಸೋಲು ಅನುಭವಿಸಿ ಪಾಠ ಕಲಿತಿದ್ದು, ಹೀಗಾಗಿ ಈ ಬಾರಿ ಸಮೀಕ್ಷೆ ಆಧರಿಸಿಯೇ ಟಿಕೆಟ್‌ ನೀಡಲು ನಿರ್ಧರಿಸಲಾಗಿದೆ.

 

ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಮೈಸೂರು ಕಡೆ ಹೊಂದಾಣಿಕೆ ನಡೆಯಬಹುದು ಎಂಬ ದೂರು ಹೈಕಮಾಂಡ್‌ ಅಂಗಳಕ್ಕೆ ತಲುಪಿದ್ದು, ಎಚ್ಚರಿಕೆಯಿಂದ ಟಿಕೆಟ್‌ ನೀಡಲು ತೀರ್ಮಾನಿ ಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯ ನಾಯಕರಿಗೆ ತಾಕೀತು
ವಿಪಕ್ಷ ನಾಯಕರು, ಕೆಪಿಸಿಸಿ ಅಧ್ಯಕ್ಷರು, ರಾಜ್ಯ ಉಸ್ತುವಾರಿ, ಪ್ರಮುಖ ನಾಯಕರು- ಹೀಗೆ ವಿವಿಧ ಕೋಟಾಗಳಿಗೂ ಈ ಬಾರಿ ಅಂತ್ಯ ಹಾಡಲು ನಿರ್ಧ ರಿಸಲಾಗಿದೆ. ಯಾರಿಗೂ ಟಿಕೆಟ್‌ ಕೊಡಿಸುವ ಭರವಸೆ ನೀಡದಂತೆ ರಾಜ್ಯ ನಾಯಕರಿಗೆ ಹೈಕಮಾಂಡ್‌ ತಾಕೀತು ಮಾಡಿದೆ ಎಂದು ತಿಳಿದು ಬಂದಿದೆ.

ಹಿಂದಿನ ಚುನಾವಣೆಗಳಲ್ಲಿ ಅಭ್ಯರ್ಥಿ ಬದಲಾವಣೆಯೂ ಕೆಲವು ಕ್ಷೇತ್ರಗಳಲ್ಲಿ ಪಕ್ಷದ ಮತಗಳಿಕೆ ಕುಸಿಯಲು ಕಾರಣ ಎಂಬುದು ಸಮೀಕ್ಷೆಯಲ್ಲಿ ಗೊತ್ತಾಗಿದೆ. ಹೀಗಾಗಿ ವರ್ಚಸ್ಸು, ಸಮುದಾಯ, ಸಾಮರ್ಥ್ಯದ ಆಧಾರದ ಮೇಲೆ ಟಿಕೆಟ್‌ ನೀಡಲಾಗುತ್ತದೆ. ಈ ಬಾರಿ ಸೋತರೂ ಮುಂದಿನ ಚುನಾವಣೆಯ ವರೆಗೆ ತಾಳ್ಮೆಯಿಂದ ಪಕ್ಷ ಸಂಘಟನೆ, ಕ್ಷೇತ್ರ ಸಂಪರ್ಕದಲ್ಲಿ ಇರಬಲ್ಲಂಥ ಅಭ್ಯರ್ಥಿಗಳಿಗೆ ಆದ್ಯತೆ ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ವೈಯಕ್ತಿಕ ವಾಗಿ, ಕೆಪಿಸಿಸಿ ವತಿಯಿಂದ ಹಾಗೂ ರಾಜ್ಯ ಉಸ್ತುವಾರಿ ಮಾಡಿರುವ ಸಮೀಕ್ಷೆಯ ಜತೆಗೆ ಎಐಸಿಸಿ ಕೂಡ ಅಂತಿಮ ಸಮೀಕ್ಷೆ ನಡೆಸಿದೆ. ಅದು ಕೇಂದ್ರ ಚುನಾವಣ ಸಮಿತಿಯ ಮುಂದೆ ಬರಲಿದೆ. ಅದರ ಆಧಾರದ ಮೇಲೆಯೇ ಟಿಕೆಟ್‌ ಘೋಷಣೆ ಯಾಗಲಿದೆ ಎಂದು ತಿಳಿದು ಬಂದಿದೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ