Breaking News

ಕಲಿ ದಾಖಲೆಗಳನ್ನು ಸೃಷ್ಟಿಸಿದ ಆಸ್ತಿ ನೋಂದಣಿ ರದ್ದು ಮಾಡುವ ಕಾಯ್ದೆ ಶೀಘ್ರವೇ ಜಾರಿ

Spread the love

ಬೆಂಗಳೂರು : ರಾಜ್ಯ ಸರ್ಕಾರವು ಆಸ್ತಿ ಮಾಲೀಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆಸ್ತಿ ನೋಂದಣಿ ರದ್ದು ಮಾಡುವ ಕಾಯ್ದೆ ಶೀಘ್ರವೇ ಜಾರಿಯಾಗಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಕಂದಾಯ ಸಚಿವ ಆರ್. ಅಶೋಕ್. ಶೀಘ್ರವೇ ಕರ್ನಾಟಕ ನೋಂದಣಿ ಕಾಯ್ದೆಯನ್ನು ಮಾರ್ಪಾಡು ಮಾಡಲಿದ್ದು, ನಕಲಿ ದಾಖಲೆ ಸೃಷ್ಟಿಸಿದ ನೋಂದಣಿಗಳನ್ನು ರದ್ದುಪಡಿಸುವ ಅಧಿಕಾರವನ್ನು ಜಿಲ್ಲಾ ನೋಂದಣಿ ಅಧಿಕಾರಿಗಳಿಗೆ ನೀಡಲಾಗುವುದು ಇದರಿಂದ ಅಸಲಿ ವಾರಸುದಾರರಿಗೆ ನ್ಯಾಯ ಸಿಗಲಿದೆ ಎಂದು ತಿಳಿಸಿದ್ದಾರೆ.

ನಿವೇಶನ, ಮನೆ, ಕಟ್ಟಡ, ಕೃಷಿ ಭೂಮಿ ಮೊದಲಾದ ಆಸ್ತಿಗಳ ಕ್ರಯ ಪತ್ರ, ದಾನ ಪತ್ರ, ವಿಭಾಗ ಪತ್ರ, ಕರಾರು ಪತ್ರ, ಹಕ್ಕು ಬಿಡುಗಡೆ ಸಂದರ್ಭದಲ್ಲಿ ನಕಲಿ ದಾಖಲೆ ಸೃಷ್ಟಿಸಿದ್ದಲ್ಲಿ ಅಂತಹ ದಾಖಲೆ ಪತ್ರಗಳನ್ನು ರದ್ದುಪಡಿಸುವ ಅಧಿಕಾರವನ್ನು ಜಿಲ್ಲಾ ನೊಂದಣಾಧಿಕಾರಿಗಳಿಗೆ ನೀಡಲಾಗುತ್ತದೆ.

ನಕಲಿ ದಾಖಲೆ ಸೃಷ್ಟಿಸಿ ನೋಂದಣಿಯಾದ ದಾಖಲೆ ಪತ್ರಗಳನ್ನು ಜಿಲ್ಲಾ ನೋಂದಣಿ ಅಧಿಕಾರಿ ರದ್ದುಪಡಿಸಲಿದ್ದು, ತಪ್ಪಿತಸ್ಥರ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಜಲಾಶಯಗಳಲ್ಲಿ ಜೀವಕಳೆ

Spread the love ಬೆಳಗಾವಿ: ಜಿಲ್ಲೆಯಲ್ಲಿ ಈ ಬಾರಿ ಪೂರ್ವ ಮುಂಗಾರು ಉತ್ತಮವಾಗಿದೆ. ಜೂನ್‌ ಅಂತ್ಯದವರೆಗೆ ಮುಂಗಾರು 286.46 ಮಿ.ಮೀ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ