Breaking News

ಕಲುಷಿತ ನೀರು ಕುಡಿದು ಇಬ್ಬರು ಸಾವು; 15ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Spread the love

ಗುರು ಮಠಕಲ್ ತಾಲ್ಲೂಕಿನ ಅನಪುರದಲ್ಲಿ ಕಲುಷಿತ ನೀರು ಕುಡಿದು ಬುಧವಾರ ಇಬ್ಬರು ಮಹಿಳೆಯರು ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಮಂದಿ ವಾಂತಿ ಭೇದಿಯಿಂದ ಅಸ್ವಸ್ಥಗೊಂಡಿದ್ದಾರೆ.

ಸಾವಿತ್ರಮ್ಮ ವೆಂಕಟಪ್ಪ ನಕ್ಕ (35), ಸಾಯಮ್ಮ ಭೀಮಶಪ್ಪ ಮಿನಾಸ ಪುರಂ (72) ಮೃತರು.

‘ಅಸ್ವಸ್ಥರನ್ನು ತೆಲಂಗಾಣದ ನಾರಾಯಣಪೇಟೆ ಆಸ್ಪತ್ರೆ, ಮೆಹಬೂಬ್ ನಗರದ ಆಸ್ಪತ್ರೆ ಮತ್ತು ಯಾದಗಿರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸ ಲಾಗಿದೆ’ ಎಂದು ವೈದ್ಯರು ತಿಳಿಸಿದ್ದಾರೆ.

‘ಇಬ್ಬರು ಮಹಿಳೆಯರು ಸಾವಿಗೆ ಮತ್ತು ಜನರು ಅಸ್ವಸ್ಥಗೊಳ್ಳಲು ಕಲುಷಿತ ನೀರು ಕುಡಿದಿದ್ದೇ ಕಾರಣ ಎಂಬ ಶಂಕೆಯಿದೆ. ಗ್ರಾಮದ ಕರೆಮ್ಮ ದೇವಸ್ಥಾನ, ಚೌಡಕಟ್ಟಿ ಓಣಿಯಲ್ಲಿ ಕುಡಿಯುವ ನೀರಿನ ಪೈಪ್‌ಲೈನ್‌ ಸೋರಿಕೆಯಿಂದ ನೀರು ಕಲುಷಿತ ಆಗಿರಬಹುದು. ಗ್ರಾಮದ ನೀರಿನ ಟ್ಯಾಂಕ್, ಕೊಳವೆಬಾವಿಯ ನೀರಿನ ಗುಣಮಟ್ಟ ಪರಿಶೀಲಿಸಲು ಅದನ್ನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಗುರುರಾಜ ಹಿರೇಗೌಡರ್ ತಿಳಿಸಿದರು.


Spread the love

About Laxminews 24x7

Check Also

ತುರ್ತುಪರಿಸ್ಥಿತಿ ವೇಳೆ ಕಾಂಗ್ರೆಸ್‌ ವಿರೋಧಿಸಿದ್ದ ಸಿದ್ದರಾಮಯ್ಯರಿಂದ ಮಾಧ್ಯಮಗಳ ನಿರ್ಬಂಧ ಸರಿಯಲ್ಲ: ಅಶೋಕ್‌ ಆಕ್ಷೇಪ

Spread the loveಬೆಂಗಳೂರು: ಎಮರ್ಜೆನ್ಸಿ ಸಮಯದಲ್ಲಿ ಮಾಧ್ಯಮಗಳ ಮೇಲೆ ನಿರ್ಬಂಧ ಹಾಕಿದ್ದಾಗ, ಇದೇ ಸಿದ್ದರಾಮಯ್ಯ  ಅಂದಿನ ಕಾಂಗ್ರೆಸ್ ಸರ್ಕಾರವನ್ನ ವಿರೋಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ