Breaking News

ಕಲುಷಿತ ನೀರು ಕುಡಿದು ಇಬ್ಬರು ಸಾವು; 15ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Spread the love

ಗುರು ಮಠಕಲ್ ತಾಲ್ಲೂಕಿನ ಅನಪುರದಲ್ಲಿ ಕಲುಷಿತ ನೀರು ಕುಡಿದು ಬುಧವಾರ ಇಬ್ಬರು ಮಹಿಳೆಯರು ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಮಂದಿ ವಾಂತಿ ಭೇದಿಯಿಂದ ಅಸ್ವಸ್ಥಗೊಂಡಿದ್ದಾರೆ.

ಸಾವಿತ್ರಮ್ಮ ವೆಂಕಟಪ್ಪ ನಕ್ಕ (35), ಸಾಯಮ್ಮ ಭೀಮಶಪ್ಪ ಮಿನಾಸ ಪುರಂ (72) ಮೃತರು.

‘ಅಸ್ವಸ್ಥರನ್ನು ತೆಲಂಗಾಣದ ನಾರಾಯಣಪೇಟೆ ಆಸ್ಪತ್ರೆ, ಮೆಹಬೂಬ್ ನಗರದ ಆಸ್ಪತ್ರೆ ಮತ್ತು ಯಾದಗಿರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸ ಲಾಗಿದೆ’ ಎಂದು ವೈದ್ಯರು ತಿಳಿಸಿದ್ದಾರೆ.

‘ಇಬ್ಬರು ಮಹಿಳೆಯರು ಸಾವಿಗೆ ಮತ್ತು ಜನರು ಅಸ್ವಸ್ಥಗೊಳ್ಳಲು ಕಲುಷಿತ ನೀರು ಕುಡಿದಿದ್ದೇ ಕಾರಣ ಎಂಬ ಶಂಕೆಯಿದೆ. ಗ್ರಾಮದ ಕರೆಮ್ಮ ದೇವಸ್ಥಾನ, ಚೌಡಕಟ್ಟಿ ಓಣಿಯಲ್ಲಿ ಕುಡಿಯುವ ನೀರಿನ ಪೈಪ್‌ಲೈನ್‌ ಸೋರಿಕೆಯಿಂದ ನೀರು ಕಲುಷಿತ ಆಗಿರಬಹುದು. ಗ್ರಾಮದ ನೀರಿನ ಟ್ಯಾಂಕ್, ಕೊಳವೆಬಾವಿಯ ನೀರಿನ ಗುಣಮಟ್ಟ ಪರಿಶೀಲಿಸಲು ಅದನ್ನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಗುರುರಾಜ ಹಿರೇಗೌಡರ್ ತಿಳಿಸಿದರು.


Spread the love

About Laxminews 24x7

Check Also

ವರದಕ್ಷಿಣೆ ಕಿರುಕುಳ ಆರೋಪ, ಐಎಸ್‌ಡಿ ಡಿವೈಎಸ್‌ಪಿ ವಿರುದ್ಧ ಎಫ್ಐಆರ್

Spread the love ಬೆಂಗಳೂರು : ಡಿವೈಎಸ್‌ಪಿಯೊಬ್ಬರ ವಿರುದ್ಧ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 41 ವರ್ಷದ ಮಹಿಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ