Breaking News

‘ಕೈ’ ಹಿಡಿದ ಬಿಜೆಪಿ, ಜೆಡಿಎಸ್‌ ಮಾಜಿ ಶಾಸಕರು

Spread the love

ಬೆಂಗಳೂರು: ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ಮುಖಂಡ ಕೆ.ಎಸ್. ಕಿರಣ್ ಕುಮಾರ್ , ವಿಧಾನ ಪರಿಷತ್ ಮಾಜಿ ಸದಸ್ಯ, ಜೆಡಿಎಸ್‌ ತ್ಯಜಿಸಿ ಬಿಜೆಪಿ ಸೇರಿದ್ದ ಸಂದೇಶ್ ನಾಗರಾಜ್ ಮತ್ತು ತುಮಕೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಜೆಡಿಎಸ್‌ನ ಎಚ್. ನಿಂಗಪ್ಪ ಅವರು ಸೋಮವಾರ ಕಾಂಗ್ರೆಸ್ ಸೇರಿದರು.

ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಸಮ್ಮುಖದಲ್ಲಿ ಈ ಮೂವರೂ ತಮ್ಮ ಬೆಂಬಲಿಗರ ಜೊತೆ ‘ಕೈ’ ಹಿಡಿದರು. ಶಾಸಕ ಜಿ. ಪರಮೇಶ್ವರ, ಮಾಜಿ ಸಂಸದ ಕೆ.ಎಚ್. ಮುನಿಯಪ್ಪ, ಮುಖಂಡರಾದ ಕೆ.ಎನ್. ರಾಜಣ್ಣ ಇದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, ‘ರಾಜ್ಯದಲ್ಲಿ ಕಾಂಗ್ರೆಸ್‌ಗೆ ಒಳ್ಳೆಯ ವಾತಾವರಣ ಇದೆ. ಹೀಗಾಗಿ ಹಲವರು ಕಾಂಗ್ರೆಸ್ ಕಡೆ ಮುಖ ಮಾಡುತ್ತಿದ್ದಾರೆ. ಬೇರೆ ಪಕ್ಷಗಳ ಬಹಳ ಜನ ಶಾಸಕರು ಕಾಂಗ್ರೆಸ್‌ ಸೇರಲಿದ್ದಾರೆ. ಜೊತೆಗೆ ಮಂತ್ರಿಯಾಗಿದ್ದ ಕೆಲವರು ಸೇರುವ ಸಂಭವ ಇದೆ’ ಎಂದರು.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ