Breaking News

ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ-ಮಗ ಸಾವು…………..

Spread the love

ಚಿಕ್ಕೋಡಿ (ಬೆಳಗಾವಿ): ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ-ಮಗ ಸಾವನ್ನಪ್ಪಿರುವ ಘಟನೆ ಕಾಗವಾಡ ತಾಲೂಕಿನ ಜುಗುಳ ಗ್ರಾಮದಲ್ಲಿ ನಡೆದಿದೆ.

ಜುಗುಳ ಗ್ರಾಮದ ಭರತ್ ಅಲಾಸೆ (46), ಮಗ ಪ್ರೇಮ್ ಅಲಾಸೆ (20) ಮೃತ ದುರ್ದೈವಿಗಳು. ಭರತ್ ಅವರು ತಮ್ಮ ಹೊಲದಿಂದ ಟ್ರ್ಯಾಕ್ಟರ್ ನಲ್ಲಿ ಮೇವು ತರುತ್ತಿದ್ದರು. ಈ ವೇಳೆ ಟ್ರ್ಯಾಕ್ಟರ್ ಮೇಲೆ ಕುಳಿದಿದ್ದ ಭರತ್, ಪ್ರೇಮ್ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳಕ್ಕೆ ಕಾಗವಾಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕಾಗವಾಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಶೀಘ್ರದಲ್ಲಿ ಯಡೂರ ಫ್ರೌಢ ಶಾಲೆ ಆವರಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ:ಶಾಸಕ ಗಣೇಶ ಹುಕ್ಕೇರಿ

Spread the love ಚಿಕ್ಕೋಡಿ: ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶೀಘ್ರದಲ್ಲಿ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದ ಸರ್ಕಾರಿ ಪ್ರೌಢ ಹಾಗೂ ಪ್ರಾಥಮಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ