Breaking News

ಮಾಂಸದೂಟ ಸೇವಿಸಿ ನಾಗಬನಕ್ಕೆ ಭೇಟಿ ನೀಡಿದ ಸಿ.ಟಿ.ರವಿ,

Spread the love

ಟ್ಕಳ: ಫೆ.19ರಂದು ಪಟ್ಟಣಕ್ಕೆ ಭೇಟಿ ನೀಡಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಭಟ್ಕಳ ಶಾಸಕ ಸುನೀಲ ನಾಯ್ಕ ಅವರ ಮನೆಯಲ್ಲಿ ಮಾಂಸದೂಟ ಸೇವಿಸಿ ಸಂಜೆ ಪಟ್ಟಣದಲ್ಲಿ ಪುನರ್ ಸ್ಥಾಪಿಸಿದ ರಾಜಾಂಗಣ ನಾಗಬನಕ್ಕೆ ಭೇಟಿ ನೀಡಿ ನಾಗದೇವರ ದರ್ಶನ ಪಡೆದ ಫೋಟೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

 

ಈ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಂಸದೂಟ ಮಾಡಿ ಧರ್ಮಸ್ಥಳ ದರ್ಶನ ಮಾಡಿರುವ ದೃಶ್ಯ ರಾಜ್ಯಾದ್ಯಂತ ವ್ಯಾಪಕ ಚರ್ಚೆಗೆ ಈಡಾಗಿತ್ತು. ಸಿದ್ದರಾಮಯ್ಯ ಆಸ್ತಿಕರ ಟೇಕೆಗೆ ಗುರಿಯಾಗಿದ್ದರು. ಸಿ.ಟಿ.ರವಿ ಸೇರಿದಂತೆ ಬಿಜೆಪಿಯ ನಾಯಕರು ಸಿದ್ದರಾಮಯ್ಯ ಅವರನ್ನು ಇದೇ ವಿಚಾರವಾಗಿ ವ್ಯಾಪಕವಾಗಿ ಟೀಕಿಸಿದ್ದರು.

ಈಗ ಅಂತದ್ದೇ ಸ್ಥಿತಿಗೆ ಸಿ.ಟಿ.ರವಿ ಒಳಗಾಗಿದ್ದಾರೆ. ಶಿರಾಲಿಯಲ್ಲಿರುವ ಶಾಸಕ ಸುನೀಲ ನಾಯ್ಕರ ಮನೆಯಲ್ಲಿ ಮಾಂಸದೂಟ ಮಾಡಿ ಸಂಜೆ ರಾಜಾಂಗಣ ನಾಗಬನ ದರ್ಶನ ಮಾಡಿರುವು ಸ್ಥಳೀಯ ಆಸ್ತಿಕರು ಸಾಮಾಜಿಕ ಜಾಲಾತಾಣದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಘಟ‌ನೆ ಸಂಬಂಧ ಪ್ರತಿಕ್ರಿಯೆ ಪಡೆಯಲು ಶಾಸಕ ಸುನೀಲ ನಾಯ್ಕ ಸಂಪರ್ಕಿಸಲು ಪ್ರಯತ್ನಿಸಲಾಯಿತಾದರೂ ಅವರು ಕರೆ ಸ್ವೀಕರಿಸಲಿಲ್ಲ.


Spread the love

About Laxminews 24x7

Check Also

ಬೈಕ್ – ಹಾಲಿನ ವಾಹನ ನಡುವೆ ಡಿಕ್ಕಿ; ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವು

Spread the loveಶಿವಮೊಗ್ಗ: ಹಾಲಿನ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಶಿವಮೊಗ್ಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ